ಆ್ಯಪ್ನಗರ

ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್‌: ವಾಹನ ಪಲ್ಟಿಯಾಗಿ ಮೂವರ ಸಾವು

ಪ್ರಧಾನಿ ನರೇಂದ್ರ ಮೋದಿ ಮೇ ಒಂದರಂದು ಉಡುಪಿಗೆ ಆಗಮಿಸಲಿದ್ದು, ಆ ಕಾರ್ಯಕ್ರಮಕ್ಕೆ ಪೆಂಡಾಲ್‌ ಸಾಗಿಸುತ್ತಿದ್ದ ಟೆಂಪೊ ಉರುಳಿ ಮೂವರು ಮೃತಪಟ್ಟಿದ್ದಾರೆ.

Vijaya Karnataka Web 29 Apr 2018, 12:36 pm
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಮೇ ಒಂದರಂದು ಉಡುಪಿಗೆ ಆಗಮಿಸಲಿದ್ದು, ಆ ಕಾರ್ಯಕ್ರಮಕ್ಕೆ ಪೆಂಡಾಲ್‌ ಸಾಗಿಸುತ್ತಿದ್ದ ಟೆಂಪೊ ಉರುಳಿ ಮೂವರು ಮೃತಪಟ್ಟಿದ್ದಾರೆ.
Vijaya Karnataka Web ACCIDENT.


ಟೆಂಪೊ ಪೆರ್ಡೂರು ಸಮೀಪ ಅಪಘಾತ ನಡೆದಿದ್ದು, ಮೃತರನ್ನು ಅಸ್ಸಾಂ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ.

ಚಿತ್ರದುರ್ಗದಿಂದ ಪೆಂಡಾಲ್ ಸಾಗಾಟ ಮಾಡುತ್ತಿದ್ದ ಟೆಂಪೊ ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿದೆ ಎನ್ನಲಾಗಿದೆ.

ಗಾಯಗೊಂಡಿರುವ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಖಚಿತ ಮಾಹಿತಿ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ