ಆ್ಯಪ್ನಗರ

ಶೀರೂರು ಶ್ರೀ ವಿಧಿವಶ: ಮಠದ ಕೋಣೆ ಪೊಲೀಸ್ ವಶಕ್ಕೆ

ಶೀರೂರು ಶ್ರೀ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮೂಲ ಮಠದ ಎರಡು ಕೋಣೆಗಳನ್ನು ಸುಪರ್ದಿಗೆ ಪಡೆದು ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Vijaya Karnataka Web 19 Jul 2018, 9:03 pm
ಉಡುಪಿ: ಶೀರೂರು ಶ್ರೀ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮೂಲ ಮಠದ ಎರಡು ಕೋಣೆಗಳನ್ನು ಸುಪರ್ದಿಗೆ ಪಡೆದು ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Vijaya Karnataka Web Shiroor


ಶ್ರೀಗಳು ಅಸ್ವಸ್ಥಗೊಂಡ ಹಿರಿಯಡ್ಕ ಸಮೀಪದ ಶೀರೂರು ಮಠದ ಅಡುಗೆ ಕೋಣೆ ಹಾಗೂ ಶ್ರೀಗಳು ಮಲಗುವ ಕೋಣೆಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ವಿಧಿವಿಜ್ಞಾನ ತಂಡ ಮಾಹಿತಿ ಕಲೆ ಹಾಕುತ್ತಿದೆ. ಉಡುಪಿ ಶೀರೂರು ಮಠದಲ್ಲೂ ಪೊಲೀಸರು ತನಿಖೆ ನಡೆಸಲಿದ್ದಾರೆ.

ಹಿರಿಯಡ್ಕ ಮೂಲ ಮಠಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ‌. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಹಿರಿಯಡ್ಕ ಮೂಲ ಮಠಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ತನಿಖೆ ಪೂರ್ಣಗೊಂಡ ಬಳಿಕವೇ ಕೋಣೆಗಳನ್ನು ಮಠಕ್ಕೆ ನೀಡಲಾಗುವುದೆಂದು ಪೊಲೀಸ್ ಮೂಲಗಳು ತಿಳಿಸಿವೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ