ಆ್ಯಪ್ನಗರ

ಉಡುಪಿಯಲ್ಲಿ ರೂಬಿಕ್‌ ಕ್ಯೂಬ್‌ನಲ್ಲಿ ಮೂಡಿಬಂದರು ಸಾಲು ಮರದ ತಿಮ್ಮಕ್ಕ!

ಉಡುಪಿಯಲ್ಲಿ ಸಾಲು ಮರದ ತಿಮ್ಮಕ್ಕ ಅವರ ಕುರಿತ ಸಾಕ್ಷ್ಯಚಿತ್ರದ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಯುವ ಕಲಾವಿದ ಮಹೇಶ್‌ ಮಲ್ಪೆ ಅವರಿಂದ ರುಬಿಕ್‌ ಕ್ಯೂಬ್‌ನಲ್ಲಿ ಮೂಡಿಬಂದ ತನ್ನ ಭಾವಚಿತ್ರವನ್ನು ಕಂಡು ಸಾಲು ಮರದ ತಿಮ್ಮಕ್ಕ ಖುಷಿ ಪಟ್ಟರು. ಈ ಕುರಿತಂತೆ ಒಂದು ವರದಿ.

Vijaya Karnataka 17 Sep 2019, 3:04 pm
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಎಂಜಿಎಂ ಕಾಲೇಜು ಉಡುಪಿ ಹಾಗೂ ರಸಿಕ ರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಪರ್ಕಳ ಸಹಭಾಗಿತ್ವದಲ್ಲಿ ಸೋಮವಾರ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ವಿಶ್ವ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಕುರಿತ ಸಾಕ್ಷ್ಯಚಿತ್ರದ ಬಿಡುಗಡೆ ನಡೆಯಿತು.
Vijaya Karnataka Web salu marada thimmakka rubik cube


ಕಾರ್ಯಕ್ರಮದಲ್ಲಿ ಯುವ ಕಲಾವಿದ ಮಹೇಶ್‌ ಮಲ್ಪೆ ಅವರಿಂದ ರೂಬಿಕ್‌ ಕ್ಯೂಬ್‌ನಲ್ಲಿ ಮೂಡಿಬಂದ 108 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಭಾವಚಿತ್ರ ವಿಶೇಷ ಆಕರ್ಷಣೆ ಪಡೆಯಿತು.

ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಸಮಾನ ಮನಸ್ಕರಿಂದ ಆರಂಭಗೊಂಡ 'ಸಂಸ್ಕೃತಿ ವಿಶ್ವ ಪ್ರತಿಷ್ಠಾನ' ಸಂಘಟನೆಯನ್ನು ಸಾಲು ಮರದ ತಿಮ್ಮಕ್ಕ ಅವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಅಧ್ಯಕ್ಷ ಕೃಷ್ಣ ರಾವ್‌ ಕೊಡಂಚ, ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್‌ ಬಿ.ಎನ್‌. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್‌ ಡಾ.ಎಂ.ಜಿ.ವಿಜಯ್‌, ಉದ್ಯಮಿ ಅಶ್ವಿನ್‌ ಹೆಬ್ಬಾರ್‌, ಪ್ರತಿಷ್ಠಾನದ ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್‌, ಕಲಾವಿದೆ ಭಾವನಾ ಕೆರೆಮಠ ಉಪಸ್ಥಿತರಿದ್ದರು.

ಸಾಕ್ಷ್ಯ ಚಿತ್ರದ ನಿರ್ಮಾಪಕರುಗಳಾದ ಇಂದ್ರಾಳಿ ಜಯಕರ ಶೆಟ್ಟಿ, ಯು.ವಿಶ್ವನಾಥ ಶೆಣೈ, ಸುಗುಣ ಸುವರ್ಣ, ವಿ.ಜಿ.ಶೆಟ್ಟಿ ಹಾಗೂ ವಿಘ್ನೇಶ್ವರ ಅಡಿಗ ಅವರಿಗೆ ಸಾಲುಮರದ ತಿಮ್ಮಕ್ಕ ಅವರಿಂದ ವಿಶೇಷ ಗೌರವಾರ್ಪಣೆ ನಡೆಯಿತು.

ಸಭಾ ಕಾರ್ಯಕ್ರಮದ ಬಳಿಕ ಶಿಲ್ಪಾ ಜೋಷಿ ಅವರಿಂದ 'ನನ್ನೊಳಗಿನ ಅವಳು 'ಏಕ ವ್ಯಕ್ತಿ ರಂಗ ಪ್ರಯೋಗ ಪ್ರಸ್ತುತಗೊಂಡಿತು. ಕಲಾವಿದೆ ಭಾವನಾ ಕೆರೆ ಮಠ ಅವರ 'ಬಿಂಬದೊಳಗಿನ ಅರ್ಥ ' ಮಕ್ಕಳ ನಾಟಕ ಕೃತಿಯ ಲೋಕಾರ್ಪಣೆ ನೆರವೇರಿತು.

ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಗೌರವಾರ್ಪಣೆ ನಡೆಯಿತು.

ಅವಿನಾಶ್‌ ಕಾಮತ್‌ ಹಾಗೂ ಶ್ರೇಯಸ್‌ ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು. ಡಾ.ಹರೀಶ್‌ ಜೋಷಿ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ