ಆ್ಯಪ್ನಗರ

ಸಾಲಿಗ್ರಾಮ:ಡಾ.ಶಿವರಾಮ ಕಾರಂತ 22ನೇ ಸ್ಮೃತಿ ದಿನಾಚರಣೆ

ಇಂದಿನ ಮಕ್ಕಳು ಕಾರಂತರ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ. ಹಿರಿಯ ಸಾಹಿತಿಗಳ ಸಾಹಿತ್ಯ, ಕಾದಂಬರಿಗಳನ್ನು ಓದಬೇಕಿದೆ.ಶಾಲಾ ಕಾಲೇಜುಗಳಲ್ಲಿ ಕಾರಂತರ ಸಾಹಿತ್ಯಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲಿ ಕಾರಂತರ ಸಾಹಿತ್ಯ ಅಮರವಾಗಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

Vijaya Karnataka 10 Dec 2018, 5:00 am
ಕೋಟ: ಇಂದಿನ ಮಕ್ಕಳು ಕಾರಂತರ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ. ಹಿರಿಯ ಸಾಹಿತಿಗಳ ಸಾಹಿತ್ಯ, ಕಾದಂಬರಿಗಳನ್ನು ಓದಬೇಕಿದೆ.ಶಾಲಾ ಕಾಲೇಜುಗಳಲ್ಲಿ ಕಾರಂತರ ಸಾಹಿತ್ಯಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲಿ ಕಾರಂತರ ಸಾಹಿತ್ಯ ಅಮರವಾಗಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.
Vijaya Karnataka Web 14


ಸಾಲಿಗ್ರಾಮದ ಡಾ.ಕೋಟ ಶಿವರಾಮ ಕಾರಂತ ಸಂಶೋಧನೆ ಮತ್ತು ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದಲ್ಲಿ ಸಾಲಿಗ್ರಾಮ ಡಾ.ಕೆ.ಶಿವರಾಮ ಕಾರಂತ ರಂಗರಥ ಮಾನಸದಲ್ಲಿ ಭಾನುವಾರ ನಡೆದ ಕೋಟ ಡಾ.ಶಿವರಾಮ ಕಾರಂತ 22ನೇ ಸ್ಮೃತಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷ ತೆ ವಹಿಸಿದ್ದರು. ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ,ಸಾಹಿತಿ ಡಾ.ಎನ್‌.ದೇವರಾಜ್‌, ಸಾಲಿಗ್ರಾಮ ಕಾರ್ಕಡದ ಗೆಳೆಯರ ಬಳಗದ ಅಧ್ಯಕ್ಷ ತಾರಾನಾಥ ಹೊಳ್ಳ ಉಪಸ್ಥಿತರಿದ್ದರು.

ಸಾಲಿಗ್ರಾಮ ಡಾ.ಕೋಟ ಶಿವರಾಮ ಕಾರಂತ ಸಂಶೋಧನೆ ಮತ್ತು ಅಧ್ಯಯನ ಸಂಸ್ಥೆಯ ಅಧ್ಯಕ್ಷೆ ಬಿ.ಮಾಲಿನಿ ಮಲ್ಯ ಸ್ವಾಗತಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಘುರಾಮ್‌ ಬೈಕಾಡಿ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭ ಜಾನಪದ ವಸ್ತು ಪ್ರದರ್ಶನ,ಕಾರಂತರ ಮೈಮನಗಳ ಸುಳಿ ಮತ್ತು ಇತರೆ ಕಾದಂಬರಿಗಳ ಕುರಿತು ವಿಚಾರಗೋಷ್ಠಿಗಳು ನಡೆದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ