ಆ್ಯಪ್ನಗರ

ವಿಷ ಪ್ರಾಶನ ಶಂಕೆ: ಪೊಲೀಸರಿಂದ ಶೀರೂರು ಶ್ರೀ ಸಾವಿನ ತನಿಖೆ

ಶೀರೂರು ಶ್ರೀಗಳ ದೇಹದಲ್ಲಿ ವಿಷಪ್ರಾಶನ ಆಗಿರುವ ಶಂಕೆಯಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.

Vijaya Karnataka Web 19 Jul 2018, 1:34 pm
ಉಡುಪಿ: ಶೀರೂರು ಶ್ರೀಗಳ ದೇಹದಲ್ಲಿ ವಿಷಪ್ರಾಶನ ಆಗಿರುವ ಶಂಕೆಯಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಶ್ರೀಗಳ ಪಾರ್ಥಿವ ಶರೀರವನ್ನು ಮಣಿಪಾಲ ಆಸ್ಪತ್ರೆಯಿಂದ ಶವಗಾರಕ್ಕೆ ರವಾನಿಸಲಾಗಿದೆ.
Vijaya Karnataka Web shree.


ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಉಡುಪಿ ಶ್ರೀಕೃಷ್ಣ ಮಠಕ್ಕೆ ತರಲಾಗುವುದು. ಮಣಿಪಾಲ ಆಸ್ಪತ್ರೆಯ ಮುಂಭಾಗ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು, ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಮೃತದೇಹವನ್ನು ಸಾಗಿಸುವ ಸಲುವಾಗಿ ಬಿದಿರಿನ ಬುಟ್ಟಿ, ಅರಳು ಶವಗಾರಕ್ಕೆ ತರಲಾಗಿದೆ.


ಬುಧವಾರ ತಡ ರಾತ್ರಿ ಐಸಿಯುಗೆ ದಾಖಲಾಗಿದ್ದ ಶ್ರೀಗಳು ಬಹು ಅಂಗಾಂಗ ವೈಫಲ್ಯದಿಂದ ಅಸು ನೀಗಿದ್ದಾರೆ. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಿ ಡಯಾಲಿಸಿಸ್‌ ಕೂಡ ಮಾಡಲಾಗಿತ್ತು. ಶ್ರೀಗಳ ದೇಹದಲ್ಲಿ ವಿಪರೀತ ರಕ್ತಸ್ರಾವ ಆಗಿತ್ತು. ವಿಷಪ್ರಾಶನದ ಶಂಕೆಯಿದೆ, ಪೋಲಿಸರಿಗೆ ಮಾಹಿತಿ ನೀಡಿದ್ದೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಶ್ರೀಗಳನ್ನು ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ