ಆ್ಯಪ್ನಗರ

ರಾಜ್ಯ ರಾಜಕೀಯ ಅಸಹ್ಯ ಹುಟ್ಟಿಸಿದೆ: ಪ್ರಮೋದ್ ಮುತಾಲಿಕ್

ಜನಪ್ರತಿನಿಧಿಗಳು ಅಧಿಕಾರದ ಆಸೆಗಾಗಿ ಕೋಟಿ ಕೋಟಿ ಡೀಲ್ ಮಾಡಿಕೊಳ್ಳುತ್ತಿದ್ದಾರೆ. ಆ ಹಣ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಅಪ್ಪನ ಹಣವೇ? ನಾವು, ನೀವು ಕೊಟ್ಟಿರುವ ತೆರಿಗೆ ಹಣ ರೆಸಾರ್ಟ್, ಡೀಲ್‍ಗೆ ದುರುಪಯೋಗ ಆಗುತ್ತಿದೆ ಎಂದು ವಾಗ್ಧಾಳಿ ನಡೆಸಿದ ಪ್ರಮೋದ್ ಮುತಾಲಿಕ್.

Vijaya Karnataka Web 10 Feb 2019, 4:04 pm
ಉಡುಪಿ: ರಾಜ್ಯ ರಾಜಕೀಯ ಅಸಹ್ಯವಾಗಿದ್ದು, ದೇಶ ಹಾಗೂ ರಾಜ್ಯದ ಅಭಿವೃದ್ಧಿ ಹಿತಾದೃಷ್ಟಿಯಿಂದ ಮೂರು ಪಕ್ಷವನ್ನು ಧಿಕ್ಕರಿಸಿ ಹೊಸ ಪಕ್ಷ ಸ್ಥಾಪಿಸುವ ಅವಶ್ಯವಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
Vijaya Karnataka Web Mutalik


ಉಡುಪಿ ಬೋರ್ಡ್ ಹೈಸ್ಕೂಲ್‍ನಲ್ಲಿ ನಡೆಯುವ ಧರ್ಮ ಸಭೆಯ ಅಂಗವಾಗಿ ಉಡುಪಿಗೆ ಭಾನುವಾರ ಆಗಮಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿ, ಒಬ್ಬರು ಆಡಿಯೋ ಬಿಡುಗಡೆ ಮಾಡುತ್ತಾರೆ. ಇನ್ನೊಬ್ಬರು ನಾಳೆ ವೀಡಿಯೊ ಬಿಡುಗಡೆ ಮಾಡುತ್ತೇನೆ ಎನ್ನುತ್ತಾರೆ. ಇದೆಲ್ಲ ರಾಜಕೀಯವೇ ಎನ್ನುವ ಅಸಹ್ಯ ಹುಟ್ಟಿದೆ. ನಿಮ್ಮ ಬಳಿ ವೀಡಿಯೋ ಇದ್ದು ಮೊದಲೇ ಯಾಕೆ ಬಿಡುಗಡೆ ಮಾಡಿಲ್ಲ? ಬಿಜೆಪಿ ಮಾನನಷ್ಟ ಮೊಕದ್ದಮೆ ಯಾಕೆ ಹಾಕಿಲ್ಲ? ನೀವು ಸತ್ಯವಂತರು, ನ್ಯಾಯದ ಪರವಾಗಿದ್ದರೆ ನ್ಯಾಯಾಲಯಕ್ಕೆ ಹೋಗಿ ಎಂದು ಬಿಜೆಪಿಗೆ ಸವಾಲು ಹಾಕಿದರು.

ಜನಸಂಘ ಬಿಜೆಪಿಯ ಪ್ರಾಮಾಣಿಕತೆ ಈಗ ಎಲ್ಲಿಗೆ ಹೋಗಿದೆ? ಹಿಂದುತ್ವದ ಹೋರಾಟಕ್ಕೆ ಏನಾಗಿದೆ? ಜನಪ್ರತಿನಿಧಿಗಳು ಅಧಿಕಾರದ ಆಸೆಗಾಗಿ ಕೋಟಿ ಕೋಟಿ ಡೀಲ್ ಮಾಡಿಕೊಳ್ಳುತ್ತಿದ್ದಾರೆ. ಆ ಹಣ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಅಪ್ಪನ ಹಣವೇ? ನಾವು, ನೀವು ಕೊಟ್ಟಿರುವ ತೆರಿಗೆ ಹಣ ರೆಸಾರ್ಟ್, ಡೀಲ್‍ಗೆ ದುರುಪಯೋಗ ಆಗುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ