ಆ್ಯಪ್ನಗರ

ಎಲ್ಲದರಲ್ಲೂ ಫಸ್ಟ್ ಕ್ಲಾಸ್, ಕನ್ನಡದಲ್ಲಿ ಮಾತ್ರ ಕಡಿಮೆ ಅಂಕ: ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಇಂಟರ್‌ನೆಟ್‍ನಲ್ಲಿ ಫಲಿತಾಂಶ ಗಮನಿಸಿದ ಆಕೆಯ ಸಹೋದರಿಯಿಂದ ಮಾಹಿತಿ ಪಡೆದ ಪ್ರಜ್ಞಾ ಮನನೊಂದಿದ್ದರು. ಮನೆಯ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡು ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ತಿಳಿಸಿದ್ದಾರೆ.

Vijaya Karnataka Web 16 Apr 2019, 2:21 pm
ಉಡುಪಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ಮನನೊಂದ ವಿದ್ಯಾರ್ಥಿನಿಯೋರ್ವಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Vijaya Karnataka Web Suicide


ಬ್ರಹ್ಮಾವರ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬ್ರಹ್ಮಾವರ ನಾಲ್ಕೂರು ಗ್ರಾಮದ ನಡ್ಕೇರಿ ಮೇಲ್ಮನೆ ನಿವಾಸಿ ಪ್ರಜ್ಞಾ ಶೆಟ್ಟಿ (18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದ ಪ್ರಜ್ಞಾ ಇಂಗ್ಲಿಷ್ 74, ಇತಿಹಾಸ 60, ಅರ್ಥಶಾಸ್ತ್ರ 82, ಸಮಾಜಶಾಸ್ತ್ರ 75, ರಾಜ್ಯಶಾಸ್ತ್ರ 91 ಸಹಿತ 5 ವಿಷಯಗಳಲ್ಲಿ ಶೇ. 60 ಕ್ಕೂ ಅಧಿಕ ಅಂಕ ಗಳಿಸಿದ್ದರು. ಆದರೆ ಕನ್ನಡದಲ್ಲಿ ಒಂದಂಕಿ 4 ಅಂಕವನ್ನಷ್ಟೇ ಪಡೆದಿದ್ದು, ಅನುತ್ತೀರ್ಣವಾಗಿದ್ದರು.


ಈ ಬಗ್ಗೆ ಇಂಟರ್‌ನೆಟ್‍ನಲ್ಲಿ ಗಮನಿಸಿದ ಆಕೆಯ ಸಹೋದರಿಯಿಂದ ಮಾಹಿತಿ ಪಡೆದ ಪ್ರಜ್ಞಾ ಮನನೊಂದಿದ್ದರು. ಮನೆಯ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡು ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ