ಆ್ಯಪ್ನಗರ

ಕೊರೊನಾ ವೈರಸ್ ಶಂಕೆ : ಉಡುಪಿಯಲ್ಲಿ ನಾಲ್ವರು ಜಿಲ್ಲಾಸ್ಪತ್ರೆಗೆ ದಾಖಲು

ಕೊರೊನಾ ವೈರಸ್‌ ಶಂಕೆ ಹಿನ್ನೆಲೆಯಲ್ಲಿ ಚೀನಾ ಹಾಗೂ ಜಪಾನ್‌ನಿಂದ 15 ದಿನಗಳ ಹಿಂದೆ ಊರಿಗೆ ಬಂದಿದ್ದ ಉಡುಪಿ ಜಿಲ್ಲೆಯ ನಾಲ್ವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ನಿಗಾ ಇಡಲಾಗಿದೆ.

Vijaya Karnataka Web 8 Feb 2020, 10:05 am
ಉಡುಪಿ: ಕೊರೊನಾ ವೈರಸ್‌ ಶಂಕೆ ಹಿನ್ನೆಲೆಯಲ್ಲಿ ಚೀನಾ ಹಾಗೂ ಜಪಾನ್‌ನಿಂದ 15 ದಿನಗಳ ಹಿಂದೆ ಊರಿಗೆ ಬಂದಿದ್ದ ಉಡುಪಿ ಜಿಲ್ಲೆಯ ನಾಲ್ವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ನಿಗಾ ಇಡಲಾಗಿದೆ.
Vijaya Karnataka Web Coronavirus


ಬ್ರಹ್ಮಾವರ ತಾಲೂಕಿನ ತಂದೆ, ತಾಯಿ ಮತ್ತು ಮಗು ಹಾಗೂ ಕಾಪು ತಾಲೂಕಿನ ಒಬ್ಬರನ್ನು ಚಿಕಿತ್ಸೆಗೆ ಒಳಪಡಿಸಿದ್ದು, ಶುಕ್ರವಾರದಿಂದ ಪ್ರತ್ಯೇಕ ವಾರ್ಡ್‌ನಲ್ಲಿ ನಿಗಾ ಇರಿಸಲಾಗಿದೆ. ತಂದೆ, ತಾಯಿ, ಮಗು ಚೀನಾದಲ್ಲಿ ನೆಲೆಸಿದ್ದು, ಕಳೆದ 15 ದಿನಗಳ ಹಿಂದೆ ರಜೆ ಮೇರೆಗೆ ಊರಿಗೆ ಆಗಮಿಸಿದ್ದರು. ಕಾಪು ತಾಲೂಕಿನ ಯುವಕ ಜಪಾನ್‌ಗೆ ಹೋಗಿ ಬಂದಿದ್ದರು. ಅವರಿಗೆ ಶೀತ, ಕೆಮ್ಮು ಕಾಣಿಸಿಕೊಂಡಿದ್ದು, ಪರೀಕ್ಷೆಗಾಗಿ ಆಸ್ಪತ್ರೆಗೆ ಆಗಮಿಸಿದ್ದರು. ಈ ನಾಲ್ವರನ್ನು ಪರೀಕ್ಷಿಸಿದ ವೈದ್ಯರು ಮುಂಜಾಗ್ರತಾ ಕ್ರಮಕ್ಕಾಗಿ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡುತ್ತಿದ್ದಾರೆ.

ಈ ನಾಲ್ವರ ರಕ್ತ ಹಾಗೂ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅಂತಹ ಯಾವುದೇ ಯಾವುದೇ ಲಕ್ಷಣ ಗೋಚರವಾಗಿಲ್ಲ. ಆತಂಕ ಪಡುವ ಅಗತ್ಯವೂ ಇಲ್ಲ. ಮುಂಜಾಗ್ರತಾ ಕ್ರಮಕ್ಕಾಗಿ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡುತ್ತಿದ್ದೇವೆ. ಎರಡು ದಿನ ನಿಗಾ ಇಟ್ಟು ಕಳುಹಿಸುತ್ತೇವೆ ಎಂದು ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಕೊರೊನಾಗೆ ಲಸಿಕೆ ಕಂಡುಹಿಡಿಯಿತು ಬೆಂಗಳೂರಿನಲ್ಲಿ ಓದಿದ್ದ ವೈದ್ಯ ವಿಜ್ಞಾನಿಯ ತಂಡ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡುತ್ತಿದ್ದು, ಇದು ಸುಳ್ಳು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿಇಲ್ಲಿಯವರೆಗೆ ಯಾವುದೇ ರೋಗಿಯಲ್ಲಿ ಕೊರೊನಾ ವೈರಸ್‌ ಇರುವುದು ದೃಢಪಟ್ಟಿಲ್ಲಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ