ಆ್ಯಪ್ನಗರ

ಹೆಜಮಾಡಿ ಬಸ್ತಿಪಡ್ಪು ಕ್ರೀಡಾಂಗಣ ಅಭಿವೃದ್ಧಿಗೆ ಉತ್ತಮ ಯೋಜನೆ ಜಾರಿ: ಲಾಲಾಜಿ

ಸಮರ್ಪಕ ನೀಲ ನಕಾಶೆ ಸಿದ್ದಪಡಿಸದ ಪರಿಣಾಮ ಹೆಜಮಾಡಿಯ ಕ್ರೀಡಾಂಗಣ ಅಭಿವೃದ್ಧಿಗೆ ತೊಡಕಾಗಿದೆ. ಕ್ರೀಡಾಂಗಣ ಅಭಿವೃದ್ಧಿಗೆ ಉತ್ತಮ ಯೋಜನೆ ತರುವ ಯೋಚನೆ ಇದೆ. ಮೈದಾನದ ವ್ಯವಸ್ಥಿತ ಬಳಕೆಯಲ್ಲಿ ಸ್ಥಳೀಯರೂ ಸಹಕಾರ ನೀಡಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್‌.ಮೆಂಡನ್‌ ಹೇಳಿದರು.

Vijaya Karnataka 4 Aug 2019, 9:53 pm
ಪಡುಬಿದ್ರಿ: ಸಮರ್ಪಕ ನೀಲ ನಕಾಶೆ ಸಿದ್ದಪಡಿಸದ ಪರಿಣಾಮ ಹೆಜಮಾಡಿಯ ಕ್ರೀಡಾಂಗಣ ಅಭಿವೃದ್ಧಿಗೆ ತೊಡಕಾಗಿದೆ. ಕ್ರೀಡಾಂಗಣ ಅಭಿವೃದ್ಧಿಗೆ ಉತ್ತಮ ಯೋಜನೆ ತರುವ ಯೋಚನೆ ಇದೆ. ಮೈದಾನದ ವ್ಯವಸ್ಥಿತ ಬಳಕೆಯಲ್ಲಿ ಸ್ಥಳೀಯರೂ ಸಹಕಾರ ನೀಡಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್‌.ಮೆಂಡನ್‌ ಹೇಳಿದರು.
Vijaya Karnataka Web MNR-03hk1


ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷ ಣ ಇಲಾಖೆ, ಉಡುಪಿ ವಲಯ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಹಾಗೂ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತವಾಗಿ ಹೆಜಮಾಡಿ ಬಸ್ತಿಪಡ್ಪು ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ತಾಲೂಕು ಮಟ್ಟದ ಫುಟ್ಬಾಲ್‌ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಅರ್ಧದಷ್ಟು ಕ್ರೀಡಾಕೂಟ ಪೂರ್ಣಗೊಂಡಿವೆ. ಇಲ್ಲಿ ಜಯಗಳಿಸುವ ತಲಾ ಒಂದೊಂದು ತಂಡಗಳು ಆ.15ರಂದು ಮಣಿಪಾಲ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದೆ ಎಂದು ತಾಲೂಕು ದೈಹಿಕ ಶಿಕ್ಷ ಣ ಪರಿವೀಕ್ಷ ಣಾ ಅಧಿಕಾರಿ ವಿಶ್ವನಾಥ ಬಾಯರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ಬಾಲಕರ 5, ಪ್ರೌಢಶಾಲಾ ಬಾಲಕರ 11 ಹಾಗೂ ಬಾಲಕಿಯರ 4 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿತ್ತು.

ಹೆಜಮಾಡಿ ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್‌ ಅಧ್ಯಕ್ಷ ತೆ ವಹಿಸಿದ್ದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ, ತಾಪಂ ಸದಸ್ಯೆ ರೇಣುಕಾ ಪುತ್ರನ್‌, ಗ್ರಾಪಂ ಉಪಾಧ್ಯಕ್ಷ ಸುಧಾಕರ ಕರ್ಕೇರ, ಸದಸ್ಯರಾದ ವಾಮನ ಕೋಟ್ಯಾನ್‌ ನಡಿಕುದ್ರು, ಗೋವರ್ಧನ ಕೋಟ್ಯಾನ್‌, ರೇಷ್ಮಾ, ಶಿಕ್ಷ ಣ ಹಿತಚಿಂತಕ ಶೇಖರ ಹೆಜಮಾಡಿ, ಹೆಜಮಾಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್‌ ಅಜೀಜ್‌, ಎಸ್‌ಡಿಎಂಸಿ ಅಧ್ಯಕ್ಷ ಉದಯ ದೇವಾಡಿಗ, ದೈಹಿಕ ಶಿಕ್ಷ ಣ ಶಿಕ್ಷ ಕರ ಸಂಘದ ತಾಲೂಕು ಅಧ್ಯಕ್ಷ ಆಲ್ವಿನ್‌ ಅಂದ್ರಾದೆ ಉಪಸ್ಥಿತರಿದ್ದರು.

ದೈಹಿಕ ಶಿಕ್ಷ ಣ ಶಿಕ್ಷ ಕಿ ರಜನಿ ಸ್ವಾಗತಿಸಿದರು. ರೂಪಾ ಕಾರ‍್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಲತಾ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ