ಆ್ಯಪ್ನಗರ

ಇಂದು ಅಖಿಲ ಭಾರತ ಕನ್ನಡ ವಚನ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ

ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು, ಮುಂಬಯಿ ರಾಧಾಕೃಷ್ಣ ನೃತ್ಯ ಅಕಾಡೆಮಿ, ಭ್ರಾಮರಿ ಯಕ್ಷನೃತ್ಯ ಕಲಾ ನಿಲಯ ಆಶ್ರಯದಲ್ಲಿ 8ನೇ ಅಖಿಲ ಭಾರತ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಮೇ 18ರಂದು ಬೆಳಗ್ಗೆ 10.40ರಿಂದ ಸಂಜೆ 5 ಗಂಟೆವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

Vijaya Karnataka 18 May 2019, 5:00 am
ಉಡುಪಿ: ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು, ಮುಂಬಯಿ ರಾಧಾಕೃಷ್ಣ ನೃತ್ಯ ಅಕಾಡೆಮಿ, ಭ್ರಾಮರಿ ಯಕ್ಷನೃತ್ಯ ಕಲಾ ನಿಲಯ ಆಶ್ರಯದಲ್ಲಿ 8ನೇ ಅಖಿಲ ಭಾರತ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಮೇ 18ರಂದು ಬೆಳಗ್ಗೆ 10.40ರಿಂದ ಸಂಜೆ 5 ಗಂಟೆವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
Vijaya Karnataka Web today the all india kannada vachana literature and cultural conference
ಇಂದು ಅಖಿಲ ಭಾರತ ಕನ್ನಡ ವಚನ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ


ಅಂದು ಬೆಳಗ್ಗೆ 10.40ಕ್ಕೆ ಶ್ರೀಕೃಷ್ಣ ಮಠದಿಂದ ಕುಂಭ ಕಳಸದೊಂದಿಗೆ ಸಮ್ಮೇಳನಾಧ್ಯಕ್ಷೆ ಅಮಿತಾ ಜೆತಿನ್‌ ಅವರನ್ನು ರಾಜಾಂಗಣದ ಸಭಾ ಮಂಟಪಕ್ಕೆ ಕರೆತರಲಾಗುವುದು. ಮುಖ್ಯ ಅತಿಥಿಗಳಾಗಿ ಕಟೀಲ್‌ ಸದಾನಂದ ಶೆಟ್ಟಿ, ಸುಕನ್ಯಾ ಸುಬ್ರಹ್ಮಣ್ಯ ಭಟ್‌ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ರಾಧಾಕೃಷ್ಣ ಅಕಾಡೆಮಿ ಮುಂಬಯಿ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.

ವಚನ ಸಾಹಿತ್ಯದಲ್ಲಿ ಕನ್ನಡ ಭಾಷೆ, ಶಿಕ್ಷಣ, ಮಾಧ್ಯಮ, ಕೃಷಿ, ಜನಪದ ಸಾಹಿತ್ಯ ಕುರಿತು ಉಪನ್ಯಾಸ ನಡೆಯಲಿದ್ದು, ಬೆಂಗಳೂರು ಈಸ್ಟ್‌ ವೆಸ್ಟ್‌ ತಾಂತ್ರಿಕ ಕಾಲೇಜಿನ ಮುಖ್ಯ ಉಪನ್ಯಾಸಕ ಡಾ. ಎಸ್‌.ಜೆ. ಹೀರೆಮಠ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಡಿಪು ಸೂರಜ್‌ ಶಿಕ್ಷಣ ಸಂಸ್ಥೆ ಡಾ. ಮಂಜುನಾಥ್‌ ಎಸ್‌. ರೇವಣಕರ್‌, ಬೆಂಗಳೂರು ಕಾವೇರಿ ಗ್ರಾಮೀಣ ಬ್ಯಾಂಕ್‌ ವ್ಯವಸ್ಥಾಪಕ ಎನ್‌.ಎಸ್‌. ರಾಕೇಶ್‌ ಭಾಗವಹಿಸಲಿದ್ದಾರೆ.

ಸಂಜೆ 3.30ಕ್ಕೆ ಸಮಾರೋಪ ನಡೆಯಲಿದ್ದು, ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ. ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ್‌ ಆಳ್ವ ಸಿದ್ಧಗಂಗಾ ಶ್ರೀಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಆರ್‌ಎನ್‌ಎಸ್‌ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್‌ ಡಾ.ಸುಧೀರ್‌ ಪೈ ಕೆ.ಎಲ್‌. ಸಿದ್ಧಗಂಗಾ ಶ್ರೀಕೈಲಾಸದೆಡೆಗೆ ಆಶಯ ನುಡಿ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ