ಆ್ಯಪ್ನಗರ

ಉಡುಪಿ ಜಿಲ್ಲೆಯಲ್ಲಿ ಟ್ರಾನ್ಸ್‌ಜೆಂಡರ್ಸ್‌ ನೋಂದಣಿ ಅಭಿಯಾನ: ಹೆಪ್ಸಿಬಾ

ಉಡುಪಿ ಜಿಲ್ಲೆಯಲ್ಲಿರುವ ಟ್ರಾನ್ಸ್‌ಜೆಂಡರ್‌(ತೃತೀಯ ಲಿಂಗಿ) ಗಳಿಗೆ ಸರಕಾರದ ವಿವಿಧ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅವರ ನಿಖರ ಸಂಖ್ಯೆವಿಲ್ಲದ ಕಾರಣ ಜಿಲ್ಲೆಯಲ್ಲಿನ ಟ್ರಾನ್ಸ್‌ಜೆಂಡರ್‌ಗಳನ್ನು ನೊಂದಣಿ ಮಾಡಿ, ಅವರಿಗೆ ಗುರುತಿನ ಚೀಟಿ ವಿತರಿಸಲು ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Vijaya Karnataka 7 Jul 2019, 5:00 am
ಉಡುಪಿ: ಉಡುಪಿ ಜಿಲ್ಲೆಯಲ್ಲಿರುವ ಟ್ರಾನ್ಸ್‌ಜೆಂಡರ್‌(ತೃತೀಯ ಲಿಂಗಿ) ಗಳಿಗೆ ಸರಕಾರದ ವಿವಿಧ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅವರ ನಿಖರ ಸಂಖ್ಯೆವಿಲ್ಲದ ಕಾರಣ ಜಿಲ್ಲೆಯಲ್ಲಿನ ಟ್ರಾನ್ಸ್‌ಜೆಂಡರ್‌ಗಳನ್ನು ನೊಂದಣಿ ಮಾಡಿ, ಅವರಿಗೆ ಗುರುತಿನ ಚೀಟಿ ವಿತರಿಸಲು ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
Vijaya Karnataka Web dc


ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಟ್ರಾನ್ಸ್‌ ಜೆಂಡರ್ಸ್‌ ಸಮನ್ವಯ ಸಮಿತಿ/ಕೋಶ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೆ 282 ಮಂದಿ ಟ್ರಾನ್ಸ್‌ ಜೆಂಡರ್‌ ಮಾತ್ರ ಗುರುತಿಸಿಕೊಂಡಿದ್ದು, 27 ಮಂದಿ ಮೈತ್ರಿ ಯೋಜನೆಯ ಮಾಸಾಶನ ಪಡೆಯುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇನ್ನೂ ಹೆಚ್ಚಿನ ಟ್ರಾನ್ಸ್‌ಜೆಂಡರ್‌ಗಳಿದ್ದು, ಅವರು ಗುರುತಿಸಿಕೊಳ್ಳದ ಕಾರಣ ಅವರಿಗೆ ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲು ಅಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಇಂದಿನಿಂದ ಆ. 1 ರ ವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಸೀಲ್ದಾರ್‌ಗಳ ಅಧ್ಯಕ್ಷ ತೆಯಲ್ಲಿ ವಿಶೇಷ ಸಮಿತಿ ರಚಿಸಿ, ವಿಶೇಷ ನೊಂದಣಿ ಅಭಿಯಾನದ ಮೂಲಕ, ಟ್ರಾನ್ಸ್‌ ಜೆಂಡರ್ಸ್‌ ಅವರನ್ನು ನೊಂದಣಿ ಮಾಡಿ, ಅವರಿಗೆ ಆಗಸ್ಟ್‌ಯೊಳಗೆ ಗುರುತಿನ ಚೀಟಿ ವಿತರಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಗುರುತಿನ ಚೀಟಿ ಪಡೆದ ಟ್ರಾನ್ಸ್‌ಜೆಂಡರ್ಸ್‌ಗಳಿಗೆ ಮೈತ್ರಿ ಯೋಜನೆಯಡಿ ಮಾಸಾಶನ, ಮನೆ ನಿವೇಶನ, ಸ್ವ ಉದ್ಯೋಗಕ್ಕೆ ಸಾಲ ಸೌಲಭ್ಯ, ಅರೋಗ್ಯ ಸೇವೆ ಸಹಿತ ಟ್ರಾನ್ಸ್‌ಜೆಂಡರ್‌ಗಳಿಗೆ ಸರಕಾರ ಜಾರಿಗೊಳಿಸಿರುವ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಒದಗಿಸಲಾಗುವುದು. ದೌರ್ಜನ್ಯಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿದರು.

ಸಂಜೀವ ವಂಡ್ಸೆ ಮತ್ತು ಲಾವಣ್ಯ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಎಸ್ಪಿ ಕುಮಾರಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷ ಕಿ ಚಂದ್ರಿಕಾ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ