ಆ್ಯಪ್ನಗರ

ಉಡುಪಿ: ದೋಣಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆಸ್ತ

ಮಲ್ಪೆಯಲ್ಲಿ ಮೀನುಗಾರಿಕೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ದೋಣಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಕಟಪಾಡಿಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರುವ ಘಟನೆ ನಡೆದಿದೆ.

Vijaya Karnataka Web 11 Jun 2020, 12:46 pm
ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆ ಮಾಡಿಕೊಂಡಿದ್ದ ಭಾಗ್ಯರಾಜ್‌(27) ಮಲ್ಪೆ ಬಾಪು ತೋಟದ ಧಕ್ಕೆಯಲ್ಲಿ ನಿಲ್ಲಿಸಿದ್ದ ಹಳೆ ದೋಣಿಯಲ್ಲಿ ನೇಣು ಬಿಗಿದು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web udupi


ಬೈಲಕೆರೆಯ ಪಾವಂಜಿಗುಡ್ಡೆಯ ಮನೆಯಿಂದ ಮಂಗಳವಾರ ರಾತ್ರಿ ಸ್ನೇಹಿತನ ಮನೆಗೆ ಹೋಗುವುದಾಗಿ ತಿಳಿಸಿದ್ದ ಭಾಗ್ಯರಾಜ್‌, ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೀನುಗಾರಿಕಾ ನಷ್ಟದಿಂದ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದೆ. ಅವರು ಕಬಡ್ಡಿ ಆಟಗಾರನೂ ಆಗಿದ್ದರು. ಈ ಕುರಿತು ತಂದೆ ಸುರೇಶ್‌ ಸುವರ್ಣ ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕಟಪಾಡಿ: ಯಾವುದೋ ಕಾರಣದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರುವ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮಾಣಿಬೆಟ್ಟುವಿನಲ್ಲಿ ನಡೆದಿದೆ. ಮಟ್ಟಾರು ಮಾಣಿಬೆಟ್ಟು ನಿವಾಸಿ ವಾಸುದೇವ ಆಚಾರ್ಯ (71) ಆತ್ಮಹತ್ಯೆ ಮಾಡಿಕೊಂಡವರು.

ವಿಪರೀತ ಕುಡಿತದ ಚಟವನ್ನು ಹೊಂದಿದ್ದ ಇವರು ಮಂಗಳವಾರ ಮನೆಯಿಂದ ಹೊರಗಡೆ ಹೋಗಿದ್ದವರು ರಾತ್ರಿಯಾದರೂ ವಾಪಸ್ಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಡಿದಾಗ ಬುಧವಾರ ಮಾಣಿಬೆಟ್ಟುವಿನ ಅವರ ಮನೆಯಿಂದ ಸ್ವಲ್ಪ ದೂರದಲ್ಲಿರುವ ಶಿವರಾಯ ಎಂಬವರ ಜಾಗದಲ್ಲಿದ್ದ ಗೋಳಿಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಶಿರ್ವಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ