ಆ್ಯಪ್ನಗರ

ಕೃಷ್ಣನೂರಿನಲ್ಲಿ ಅದಮಾರು ಶ್ರೀಗಳ ಪರ್ಯಾಯ ಸಂಭ್ರಮ: ಇಲ್ಲಿದೆ ಈಶಪ್ರಿಯ ತೀರ್ಥರ ಸಮಗ್ರ ಕಾರ್ಯಕ್ರಮ ವಿವರ

ಉಡುಪಿ: ಉಡುಪಿಯಲ್ಲಿ ಪರ್ಯಾಯ ಸಂಭ್ರಮ ಮುಗಿಲು ಮುಟ್ಟಿದೆ. ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯತೀರ್ಥರ ಮೊದಲ ಪರ್ಯಾಯ ಅಂಗವಾಗಿ ಜನವರಿ 19ರಂದು ಸಂಜೆ 5.30ಕ್ಕೆ ರಾಜಾಂಗಣದ ಶ್ರೀನರಹರಿತೀರ್ಥ ವೇದಿಕೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ.

Vijaya Karnataka Web 17 Jan 2020, 6:37 pm
ಉಡುಪಿ: ಉಡುಪಿಯಲ್ಲಿ ಪರ್ಯಾಯ ಸಂಭ್ರಮ ಮುಗಿಲು ಮುಟ್ಟಿದೆ. ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯತೀರ್ಥರ ಮೊದಲ ಪರ್ಯಾಯ ಅಂಗವಾಗಿ ಜನವರಿ 19ರಂದು ಸಂಜೆ 5.30ಕ್ಕೆ ರಾಜಾಂಗಣದ ಶ್ರೀನರಹರಿತೀರ್ಥ ವೇದಿಕೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ.
Vijaya Karnataka Web udupi paryaya 2020 full details of adamaru shree program
ಕೃಷ್ಣನೂರಿನಲ್ಲಿ ಅದಮಾರು ಶ್ರೀಗಳ ಪರ್ಯಾಯ ಸಂಭ್ರಮ: ಇಲ್ಲಿದೆ ಈಶಪ್ರಿಯ ತೀರ್ಥರ ಸಮಗ್ರ ಕಾರ್ಯಕ್ರಮ ವಿವರ



​22ರಂದು ಉಡುಪಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ

ಜನವರಿ 22ರಂದು ಸಂಜೆ 5.30ಕ್ಕೆ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನೆರವೇರಲಿದೆ. ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್‌ ಜೋಷಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಡಾ. ರಂಜನ್‌ ಆರ್‌. ಪೈ, ಅದಾನಿ ಸಮೂಹದ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ, ಕಾರ್ಪೊರೇಷನ್‌ ಬ್ಯಾಂಕ್‌ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪಿ.ವಿ. ಭಾರತಿ, ಉದ್ಯಮಿ ಹರಿಯಪ್ಪ ಕೋಟ್ಯಾನ್‌ ಮುಖ್ಯ ಅತಿಥಿಗಳಾಗಿದ್ದಾರೆ.

​21ರಂದು ಉಡುಪಿಗೆ ಬಿ.ಎಲ್‌. ಸಂತೋಷ್‌

ಜನವರಿ 21ರಂದು ಸಂಜೆ 5.30ಕ್ಕೆ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ವಹಿಸಿ ಆಶೀರ್ವಚನ ನೀಡುವರು. ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಸಿ.ಎನ್‌., ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಗದಗ ಶಾಸಕ ಎಚ್‌.ಕೆ. ಪಾಟೀಲ್‌, ಹಳಿಯಾಳ ಶಾಸಕ ಆರ್‌.ವಿ. ದೇಶಪಾಂಡೆ, ಮಾಜಿ ಸಚಿವ ಕೆ. ಜಯಪ್ರಕಾಶ್‌ ಹೆಗ್ಡೆ, ವಿನಯ ಕುಮಾರ್‌ ಸೊರಕೆ, ಎ.ಜಿ. ಕೊಡ್ಗಿ, ಮಣಿಪಾಲದ ಟಿಎಂಎ ಪೈ ಪ್ರತಿಷ್ಠಾನದ ಕಾರ್ಯದರ್ಶಿ ಟಿ. ಅಶೋಕ್‌ ಪೈ, ಮಾಹೆ ವಿವಿ ಸಹಕುಲಾಧಿಪತಿ ಡಾ. ಎಚ್‌.ಎಸ್‌. ಬಲ್ಲಾಳ್‌ ಮುಖ್ಯ ಅತಿಥಿಗಳಾಗಿದ್ದಾರೆ.

​20ರಂದು ಉಡುಪಿಗೆ ಗೋವಾ ಸಿಎಂ

ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡುವ ಕಾರ್ಯಕ್ರಮದಲ್ಲಿ, ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಕಾಪು ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ಉಜ್ವಲ್‌ ಡೆವಲಪರ್ಸ್‌ನ ಪುರುಷೋತ್ತಮ ಶೆಟ್ಟಿ, ಆದರ್ಶ ಆಸ್ಪತ್ರೆಯ ನ್ಯೂರೋ ಸರ್ಜನ್‌ ಡಾ. ರಾಜಾ, ಪೂನಾದ ಸುಗ್ಗಿ ಸುಧಾಕರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

​ಶ್ರೀಗಳ ಆಶೀರ್ವಚನ ಕಾರ್ಯಕ್ರಮಕ್ಕೆ ಗಣ್ಯರ ದಂಡು..!

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಶ್ರೀಗಳ ಆಶೀರ್ವಚನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕರಾದ ವಿ. ಸುನಿಲ್‌ ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಂಗಳೂರು ಎನ್‌ಎಂಪಿಟಿ ಚೇರ್‌ಮೆನ್‌ ಎ.ವಿ. ರಮಣ, ಮಣಿಪಾಲದ ಟಿ. ಸತೀಶ್‌ ಯು. ಪೈ, ಮುಂಬಯಿಯ ಡಾ. ಎಂ.ಎಸ್‌. ಆಳ್ವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ