ಆ್ಯಪ್ನಗರ

ಉಡುಪಿ: ತಂಬಾಕು ಜಾಗೃತಿ ಕಲಾಕೃತಿ

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕ, ಉಡುಪಿ ಮಣಿಪಾಲ ರೋಟರಿ ಕ್ಲಬ್‌ ಸಹಯೋಗದಲ್ಲಿ ಕಲಾವಿದ ಶ್ರೀನಾಥ್‌ ಮಣಿಪಾಲ್‌ ಮತ್ತು ರವಿ ಹಿರೆಬೆಟ್ಟು ರಚಿಸಿದ ತಂಬಾಕು ಜಾಗೃತಿ ಕಲಾಕೃತಿಯ ಅನಾವರಣವು ಉಡುಪಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಆವರಣದಲ್ಲಿ ಭಾನುವಾರ ನಡೆಯಿತು.

Vijaya Karnataka 4 Jun 2019, 5:00 am
ಉಡುಪಿ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕ, ಉಡುಪಿ ಮಣಿಪಾಲ ರೋಟರಿ ಕ್ಲಬ್‌ ಸಹಯೋಗದಲ್ಲಿ ಕಲಾವಿದ ಶ್ರೀನಾಥ್‌ ಮಣಿಪಾಲ್‌ ಮತ್ತು ರವಿ ಹಿರೆಬೆಟ್ಟು ರಚಿಸಿದ ತಂಬಾಕು ಜಾಗೃತಿ ಕಲಾಕೃತಿಯ ಅನಾವರಣವು ಉಡುಪಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಆವರಣದಲ್ಲಿ ಭಾನುವಾರ ನಡೆಯಿತು.
Vijaya Karnataka Web UDP-03u kalakruti


ಮಣಿಪಾಲ ಕೆ.ಎಂ.ಸಿ. ಡೀನ್‌ ಡಾ. ಪ್ರಜ್ಞಾ ರಾವ್‌ ಕಲಾಕೃತಿಯ ಅನಾವರಣ ಮಾಡಿದರು. ಎಂಐಟಿ ಉಪನ್ಯಾಸಕ ಪ್ರೊ. ಬಾಲಕೃಷ್ಣ ಮದ್ದೋಡಿ ಮಾತನಾಡಿ, ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವಿಸುವವರನ್ನು ಕಂಡರೆ ಅವರ ಕೈಯಿಂದ ಅದನ್ನು ಕಿತ್ತೊಗಿಯಿರಿ ಎಂದರು.

ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ತಂಬಾಕಿನ ದುಷ್ಪರಿಣಾಮದ ಬಗ್ಗೆ ಸಂದೇಶ ಸಾರುವ ಬೀದಿ ನಾಟಕ ಪ್ರದರ್ಶಿಸಲಾಯಿತು. ಉಡುಪಿ ಜಿಲ್ಲಾ ಸರ್ವೇಕ್ಷ ಣಾ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಸುಮಾ ನಾಯರ್‌, ಡಾ.ಮುರಳೀಧರ್‌ ಕುಲಕರ್ಣಿ, ಯಶವಂತ್‌ ಬಿ.ಕೆ. ,ರಾಜವರ್ಮ ಅರಿಗ ಉಪಸ್ಥಿತರಿದ್ದರು. ಮಹೇಶ್‌ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ