ಆ್ಯಪ್ನಗರ

ಉದ್ಯಾವರ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹೊರೆಕಾಣಿಕೆ ಮೆರವಣಿಗೆ

ಮೇ 23ರಿಂದ 29ರ ವರೆಗೆ ನಡೆಯಲಿರುವ ಉದ್ಯಾವರ ಕೇದಾರ್‌ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಮಯ ಗರ್ಭಗುಡಿ ಮತ್ತು ತೀರ್ಥ ಮಂಟಪ ಸಮರ್ಪಣೆ, ಅಷ್ಟಬಂಧ ಸಹಿತ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಹೊರೆಕಾಣಿಕೆ ಮೆರವವಣಿಗೆ ಸಂಪನ್ನಗೊಂಡಿತು.

Vijaya Karnataka 24 May 2019, 5:00 am
ಕಟಪಾಡಿ: ಮೇ 23ರಿಂದ 29ರ ವರೆಗೆ ನಡೆಯಲಿರುವ ಉದ್ಯಾವರ ಕೇದಾರ್‌ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಮಯ ಗರ್ಭಗುಡಿ ಮತ್ತು ತೀರ್ಥ ಮಂಟಪ ಸಮರ್ಪಣೆ, ಅಷ್ಟಬಂಧ ಸಹಿತ ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಹೊರೆಕಾಣಿಕೆ ಮೆರವವಣಿಗೆ ಸಂಪನ್ನಗೊಂಡಿತು.
Vijaya Karnataka Web 1


ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊರಟ ಶೋಭಾಯಾತ್ರೆಯಲ್ಲಿ ನೂತನ ದೇವಸ್ಥಾನದ ಬಲಿಮೂರ್ತಿ, ಶ್ರೀ ನಂದಿಯ ಮೂರ್ತಿ ಹಾಗೂ ಹಸಿರುವಾಣಿ ಹೊರೆಕಾಣಿಕೆಗಳನ್ನು ವಿಜೃಂಭಣೆಯೊಂದಿಗೆ ಶ್ರೀ ಕ್ಷೇತ್ರಕ್ಕೆ ತರಲಾಯಿತು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಶಾಸಕ ಲಾಲಾಜಿ ಆರ್‌. ಮೆಂಡನ್‌, ಜೀರ್ಣೋದ್ಧಾರ ಸಮಿತಿ ಅಧಿಧ್ಯಧಿಕ್ಷ Ü ಪ್ರವೀಣ ಶೆಟ್ಟಿ ಕೊರಂಗ್ರಪಾಡಿ ವ್ಯವಸ್ಥಾಪನೆ ಸಮಿತಿ ಅಧ್ಯಕ್ಷ ಶೇಖರ ಕೆ.ಕೋಟ್ಯಾನ್‌, ಕ್ಷೇತ್ರದ ತಂತ್ರಿಗಳಾದ ವೇದ ಮೂರ್ತಿ ಕೆ.ಎಸ್‌. ಕೃಷ್ಣಮೂರ್ತಿ ತಂತ್ರಿ, ಪ್ರಧಾನ ಅರ್ಚಕರಾದ ಸುಧೀಂಧ್ರ ಉಪಾಧ್ಯಾಯ, ಗೌರವಾಧ್ಯಕ್ಷ ವಾದಿರಾಜ ಅರ್ಚಾರ್ಯ ಮೇಲ್ಮಠ, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್‌ ಮತ್ತು ಗ್ರಾಮದ ಜನಪ್ರತಿನಿಧಿಗಳು, ಜೀರ್ಣೋದ್ಧಾರ ಸಮಿತಿ ಸದಸ್ಯರು, ವ್ಯವಸ್ಥಾಪನೆ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ