ಆ್ಯಪ್ನಗರ

ರಾಮಮಂದಿರ ನಿರ್ಮಾಣ ಕುರಿತ ಸಮಾವೇಶದಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಲಿರುವ ಉಡುಪಿ ಸ್ವಾಮೀಜಿ!

ರಾಮಮಂದಿರ ನಿರ್ಮಾಣ ಕುರಿತು ಹೊಸದಿಲ್ಲಿಯಲ್ಲಿ ನವೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

Vijaya Karnataka Web 24 Oct 2020, 5:12 pm
ಬೆಳ್ತಂಗಡಿ: ರಾಮಜನ್ಮ ಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಯುಕ್ತ ಮುಂದಿನ ಅಭಿಯಾನ ಹೇಗೆ ನಡೆಯಬೇಕು ಎಂಬ ಕುರಿತು ಹೊಸದಿಲ್ಲಿಯಲ್ಲಿ ನವೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
Vijaya Karnataka Web vishwa Prasanna Theertha Swamiji


ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 53 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಸಂದರ್ಭ ಡಾ. ಹೆಗ್ಗಡೆಯವರನ್ನು ಭೇಟಿ ಮಾಡಿ ಶುಭ ಕೋರಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ಹೊಸದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ವಿಜಯದಶಮಿ ದಿನದಂದು ನಾವು ಪೂಜೆ ಮುಗಿಸಿಕೊಂಡು ದಿಲ್ಲಿಗೆ ಹೊರಡಲಿದ್ದೇವೆ ಎಂದರು.

ಅಪಪ್ರಚಾರದಿಂದ ನೋವುಂಟಾಗಿದೆ ಎಂದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪವಾಸ

ಎಲ್ಲ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಕರ್ನಾಟಕದಿಂದ ಭೇಟಿ ನೀಡುವ ಭಕ್ತರಿಗೆ ಉಳಿದುಕೊಳ್ಳಲು ಅನುಕೂಲವಾಗುವಂತೆ ಅಲ್ಲಲ್ಲಿ ಛತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಗುರುಗಳ ಕಾಲವಾದ ನಂತರ ಅಲ್ಲಿ ಹೋಗಿ ವ್ಯವಸ್ಥೆ ಕುರಿತು ಪರಿಶೀಲಿಸಲು ಸಾಧ್ಯವಾಗಿರಲಿಲ್ಲ. ಅದರೆ, ಈಗ ಛತ್ರಗಳನ್ನು ಪರಿಶೀಲಿಸಲಾಗುವುದು. ಕಾಶಿ, ಅಯೋಧ್ಯಾ, ಹರಿದ್ವಾರ, ಬದರಿ ಸೇರಿದಂತೆ ಎಲ್ಲಾ ತೀರ್ಥ ಕ್ಷೇತ್ರಗಳಲ್ಲಿ ಸಂಚಾರ ಮಾಡಿಕೊಂಡು ಬರಲಿದ್ದೇವೆ ಎಂದು ಹೇಳಿದರು.

ಅಪಪ್ರಚಾರದಿಂದ ನೋವುಂಟಾಗಿದೆ ಎಂದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪವಾಸ

ಶ್ರೀರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣ ಆಗುತ್ತಿದೆ. ಮುಂದಿನ ಕಾರ್ಯಗಳ ಕುರಿತು ದೇಶದಾದ್ಯಂತ ಅಭಿಯಾನ ಹೇಗೆ ನಡೆಸಬೇಕು ಎನ್ನುವ ಕುರಿತಾಗಿ ನವೆಂಬರ್ 10 ಮತ್ತು 11 ರಂದು ದೆಹಲಿಯಲ್ಲಿ ಸಮಾವೇಶ ನಡೆಯಲಿದೆ. ಅದರಲ್ಲಿ ಪಾಲ್ಗೊಳ್ಳಲು ನಾವು ಇಂದು (ಶನಿವಾರ) ಹೊರಡುತ್ತಿದ್ದೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ