ಉಡುಪಿ: ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ರದ್ದತಿಯ ಆದೇಶ ಹೊರಡಿಸಿದ್ದಾರೆ. ವಿಕೇಂಡ್ ಕರ್ಫ್ಯೂ ರದ್ದುಗೊಳಿಸುವ ಕುರಿತು ತಜ್ಞರ ಜೊತೆಗೆ ವಿಶೇಷ ಸಭೆ ನಡೆಸಿದ ಜಿಲ್ಲಾಧಿಕಾರಿ ರದ್ದತಿಯ ನಿರ್ಧಾರಕೈಗೊಂಡಿದ್ದಾರೆ. ವಾರಾಂತ್ಯ ಕರ್ಫ್ಯೂ ಬಗ್ಗೆ ಸರ್ಕಾರದಿಂದ ಈ ಮೊದಲೇ ನಿರ್ದೇಶನ ಬಂದಿತ್ತು. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳ ತೀರ್ಮಾನ ಕೈಗೊಳ್ಳಲು ಸರಕಾರ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಲಾಯಿತು. ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ. ಇನ್ನು ಕೊರೊನಾ ಸಂಬಂಧ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತವೆ ಎಂದು ಇದೆ ವೇಳೆ0 ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ಕೇರಳದಿಂದ ಬರುವಾಗ ಕೊರೊನಾ ನೆಗೆಟಿವ್, ಬಂದ ಮೇಲೆ ಕೊರೊನಾ ಪಾಸಿಟಿವ್ ಆಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಕೇರಳದಿಂದ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಕಂಡು ಬರುತ್ತಿದೆ. ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ಬರುವವರಿಗೆ ಹಾಗೂ ಹೋಗುವವರಿಗೆ ಪ್ರಯಾಣ ಮುಂದೂಡಲು ಸೂಚನೆಯನ್ನು ಡಿಸಿ ನೀಡಿದ್ದಾರೆ. ಕೇರಳದಿಂದ ಬರುವಾಗ ಉದ್ಯೋಗಿಗಳು, ವಿದ್ಯಾರ್ಥಿಗಳು ಕೊರೊನಾ ನೆಗೆಟಿವ್ ರಿಪೋರ್ಟ್ ಇರುತ್ತದೆ.
ಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ರಾತ್ರಿ ನಿರ್ಬಂಧ ಮುಂದುವರಿಕೆ
ಕರ್ನಾಟಕಕ್ಕೆ ಬಂದ ನಂತರದ ಕೋವಿಡ್ ಕೋವಿಡ್ ವರದಿ ಪಾಸಿಟಿವ್ ಬರುತ್ತಿದೆ. ಉಡುಪಿಯಲ್ಲಿ ಇಂತಹ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ಅಕ್ಟೋಬರ್ ಅಂತ್ಯದ ವರೆಗೂ ಕೇರಳ ಪ್ರಯಾಣ ನಿರ್ಬಂಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದ್ದಾರೆ
ಉಡುಪಿ ಜಿಲ್ಲೆಯಲ್ಲಿ ಕೇರಳದಿಂದ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಕಂಡು ಬರುತ್ತಿದೆ. ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ಬರುವವರಿಗೆ ಹಾಗೂ ಹೋಗುವವರಿಗೆ ಪ್ರಯಾಣ ಮುಂದೂಡಲು ಸೂಚನೆಯನ್ನು ಡಿಸಿ ನೀಡಿದ್ದಾರೆ. ಕೇರಳದಿಂದ ಬರುವಾಗ ಉದ್ಯೋಗಿಗಳು, ವಿದ್ಯಾರ್ಥಿಗಳು ಕೊರೊನಾ ನೆಗೆಟಿವ್ ರಿಪೋರ್ಟ್ ಇರುತ್ತದೆ.
ಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ರಾತ್ರಿ ನಿರ್ಬಂಧ ಮುಂದುವರಿಕೆ
ಕರ್ನಾಟಕಕ್ಕೆ ಬಂದ ನಂತರದ ಕೋವಿಡ್ ಕೋವಿಡ್ ವರದಿ ಪಾಸಿಟಿವ್ ಬರುತ್ತಿದೆ. ಉಡುಪಿಯಲ್ಲಿ ಇಂತಹ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ಅಕ್ಟೋಬರ್ ಅಂತ್ಯದ ವರೆಗೂ ಕೇರಳ ಪ್ರಯಾಣ ನಿರ್ಬಂಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದ್ದಾರೆ