ಆ್ಯಪ್ನಗರ

ನ.7ರಂದು ಕೊಲ್ಲೂರಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

2019ನೇ ಸಾಲಿನ ಪಾರ್ತಿಸುಬ್ಬ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನ.7ರಂದು ಕೊಲ್ಲೂರಿನಲ್ಲಿ ನಡೆಯಲಿದೆ. ಪಾರ್ತಿಸುಬ್ಬ ಪ್ರಶಸ್ತಿಗೆ 1ಲಕ್ಷ ರೂ. ಮೊತ್ತ, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಫಲ ತಾಂಬೂಲ ನೀಡಿ ಗೌರವಿಸಲಾಗುತ್ತದೆ.

Vijaya Karnataka Web 3 Nov 2020, 3:46 pm
ಕುಂದಾಪುರ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಪಾರ್ತಿಸುಬ್ಬ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನ.7ರಂದು ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸಭಾಭವನದಲ್ಲಿ ಜರುಗಲಿದೆ.
Vijaya Karnataka Web ಸಾಂದರ್ಭಿಕ ಚಿತ್ರ

ಈ ಬಾರಿ ಯಕ್ಷಗಾನ ಕಲಾವಿದರು ಕೊರೊನಾ ಟೆಸ್ಟ್‌ ಮಾಡೋದು ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಕೇಶವ ಶೆಟ್ಟಿಗಾರ್‌(ಅಂಬಾತನಯ ಮುದ್ರಾಡಿ), ಗೌರವ ಪ್ರಶಸ್ತಿ ಪುರಸ್ಕೃತ ಡಾ.ರಾಮಕೃಷ್ಣ ಗುಂದಿ, ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ನಲ್ಲೂರು ಜನಾರ್ದನ ಆಚಾರ್‌, ಆರ್ಗೋಡು ಮೋಹನದಾಸ ಶೆಣೈ, ಮಹಮ್ಮದ್‌ ಗೌಸ್‌, ಮೂರೂರು ರಾಮಚಂದ್ರ ಹೆಗಡೆ, ಎಂ.ಎನ್‌.ಹೆಗಡೆ ಹಳವಳ್ಳಿ, ಹಾರಾಡಿ ಸರ್ವೋತ್ತಮ ಗಾಣಿಗ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡುವರು.
ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಪ್ರದರ್ಶನ ಪ್ರಾರಂಭ

ಪಾರ್ತಿಸುಬ್ಬ ಪ್ರಶಸ್ತಿಗೆ 1ಲಕ್ಷ ರೂ. ಮೊತ್ತ, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಫಲ ತಾಂಬೂಲ ನೀಡಿ ಗೌರವಿಸಲಾಗುತ್ತದೆ. ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂ. ಮೊತ್ತ, ಪ್ರಶಸ್ತಿ ಪತ್ರ, ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ 25 ಸಾವಿರ ರೂ. ಮೊತ್ತ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ. ಸಮಾರಂಭದ ಬಳಿಕ ಹಟ್ಟಿಯಂಗಡಿ ಮೇಳದಿಂದ ಯಕ್ಷಗಾನ ಪ್ರದರ್ಶನ ಜರುಗಲಿದೆ. ಕೋವಿಡ್‌ ನಿಯಮಾವಳಿಯಡಿ ಸಮಾರಂಭ ಜರುಗಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ