ಆ್ಯಪ್ನಗರ

ಅಪಘಾತ: ಇಬ್ಬರ ಸಾವು

ಭಟ್ಕಳ (ಉತ್ತರ ಕನ್ನಡ) : ತಾಲೂಕಿನ ಮುರುಡೇಶ್ವರ ತೆರ್ನಮಕ್ಕಿಯಲ್ಲಿ ಭಾನುವಾರ ಟೆಂಪೊ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

Vijaya Karnataka 3 Jun 2019, 5:00 am
ಭಟ್ಕಳ (ಉತ್ತರ ಕನ್ನಡ) : ತಾಲೂಕಿನ ಮುರುಡೇಶ್ವರ ತೆರ್ನಮಕ್ಕಿಯಲ್ಲಿ ಭಾನುವಾರ ಟೆಂಪೊ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
Vijaya Karnataka Web KWR-2BKL1


ಮೃತರನ್ನು ಬೆಂಗ್ರೆ ಗ್ರಾಪಂ ಸಣಬಾವಿ ನಿವಾಸಿಗಳಾದ ಕೃಷ್ಣ ಮಂಜುನಾಥ ನಾಯ್ಕ (55) ಹಾಗೂ ಗಣೇಶ ನಾರಾಯಣ ನಾಯ್ಕ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೊಬ್ಬ ಬೈಕ್‌ ಸವಾರ ಕೃಷ್ಣ ಭೈರಾ ನಾಯ್ಕ ಸಾತುಮನೆ (32) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸಲಾಗಿದೆ. ಮೃತರ ಪೈಕಿ ಕೃಷ್ಣ ಮಂಜುನಾಥ ನಾಯ್ಕ ಬೆಂಗ್ರೆ ಗ್ರಾಪಂ ಮಾಜಿ ಸದಸ್ಯರಾಗಿದ್ದಾರೆ.

ಟೆಂಪೊ ಭಟ್ಕಳದಿಂದ ಮುರುಡೇಶ್ವರಕ್ಕೆ ಹಾಗೂ ಬೈಕ್‌ ಮುರುಡೇಶ್ವರದಿಂದ ಅಳ್ವೆಕೋಡಿ ಸಣಬಾವಿಯತ್ತ ಪ್ರಯಾಣ ಬೆಳೆಸಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ತಂದ ವೇಳೆ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟಿತ್ತು. ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ