ಆ್ಯಪ್ನಗರ

1.75 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ

ಹೊನ್ನಾವರ : ತಾಲೂಕಿನ ವಿವಿಧ ಭಾಗಗಳಲ್ಲಿ1 ಕೋಟಿ 75 ಲಕ್ಷದ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಸುನೀಲ್‌ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು.

Vijaya Karnataka 21 Oct 2019, 5:00 am
ಹೊನ್ನಾವರ : ತಾಲೂಕಿನ ವಿವಿಧ ಭಾಗಗಳಲ್ಲಿ1 ಕೋಟಿ 75 ಲಕ್ಷದ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಸುನೀಲ್‌ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು.
Vijaya Karnataka Web 1 75 crores to pay for the work
1.75 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ


ಮಂಕಿ ಬಣಸಾಲೆ ವಿದ್ಯಾನಗರದ ಶಾಲೆಯ 15 ಲಕ್ಷ ರೂ. ವೆಚ್ಚದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ನಂತರ ಬಳ್ಕೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಂಡರಕೇರಿಯ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ಕುದ್ರಗಿ ಗ್ರಾ.ಪಂ. ವ್ಯಾಪ್ತಿಯ ವತ್ತಗೇರಿ ಕಾಲುಸಂಕ ನಿರ್ಮಾಣಕ್ಕೆ 15 ಲಕ್ಷ ರೂ. ವೆಚ್ಚದ ಕಾಮಗಾರಿ, ಜನತಳಕೇರಿಯಿಂದ ಹರಿಜನಕೇರಿಗೆ ಹೋಗುವ ರಸ್ತೆಗೆ 45 ಲಕ್ಷ ರೂ. ವೆಚ್ಚದ ಕಾಮಗಾರಿ, ಚಿಕ್ಕನಕೋಡ ಗ್ರಾ.ಪಂ. ವ್ಯಾಪ್ತಿಯ ಬೇಣಮನೆ ಸಿಸಿ ರಸ್ತೆ ನಿರ್ಮಾಣಕ್ಕೆ 40 ಲಕ್ಷ ರೂ. ವೆಚ್ಚದ ಕಾಮಗಾರಿ, ನಗರಬಸ್ತಿಕೇರಿ ಗ್ರಾ.ಪಂ. ವ್ಯಾಪ್ತಿಯ ಗೇರುಸೊಪ್ಪಾ ಹರಿಜನಕೇರಿ ರಸ್ತೆಗೆ 40 ಕೋಟಿ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಜೂರಾದ ಕಾಲುಸಂಕ ಮತ್ತು ಕಾಂಕ್ರೀಟ್‌ ರಸ್ತೆಗಳ 1.60 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಾಗೂ ಮಂಕಿಯಲ್ಲಿ16 ಲಕ್ಷ ರೂ. ವೆಚ್ಚದಲ್ಲಿಶಾಲಾ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.

ಗ್ರಾಮೀಣ ಭಾಗದಲ್ಲಿಕಾಲುಸಂಕ ಮತ್ತು ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇನೆ. ಶಾಸಕನಾಗುವ ಪೂರ್ವದಲ್ಲಿಯೇ ಗ್ರಾಮೀಣ ಭಾಗದ ಸಮಸ್ಯೆಯನ್ನು ಅರಿತಿದ್ದೇನೆ ಎಂದರು.

ಈ ವೇಳೆ ಜಿ.ಪಂ. ಸದಸ್ಯ ದೀಪಕ ನಾಯ್ಕ, ಗ್ರಾ.ಪಂ. ಅಧ್ಯಕ್ಷ ಕೇಶವ ನಾಯ್ಕ, ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ, ಉಪಾಧ್ಯಕ್ಷ ಗಣಪತಿ ನಾಯ್ಕ ಬಿಟಿ, ಕಾರ್ಯದರ್ಶಿ ಮಂಜುನಾಥ ನಾಯ್ಕ, ಚಿತ್ತಾರದ ಗಣಪತಿ ಗೌಡ, ಶ್ರೀಧರ ನಾಯ್ಕ, ಮಾರುತಿ ನಾಯ್ಕ, ತಾ.ಪಂ. ಅಧ್ಯಕ್ಷ ಉಲಾಸ ನಾಯ್ಕ, ಉಮೇಶ ನಾಯ್ಕ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸುರೇಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ