ಆ್ಯಪ್ನಗರ

23ಕ್ಕೆ ಲಕ್ಷ ತುಳಸಿ ಅರ್ಚನೆ

ಶಿರಸಿ : ಸೋಂದಾ ಶ್ರೀ ಸ್ವರ್ಣವಲ್ಲೀ ಸಂಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆ.23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಲೋಕಕಲ್ಯಾಣಾರ್ಥವಾಗಿ ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನಾ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ.

Vijaya Karnataka 22 Aug 2019, 5:00 am
ಶಿರಸಿ : ಸೋಂದಾ ಶ್ರೀ ಸ್ವರ್ಣವಲ್ಲೀ ಸಂಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆ.23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಲೋಕಕಲ್ಯಾಣಾರ್ಥವಾಗಿ ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನಾ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ.
Vijaya Karnataka Web 23 lakhs basil offering
23ಕ್ಕೆ ಲಕ್ಷ ತುಳಸಿ ಅರ್ಚನೆ


ಬೆಳಗ್ಗೆ 9ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ವೈದಿಕರು ಹಾಗೂ ಸುತ್ತಲಿನ ಪಾಠಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೇಶದಲ್ಲಿ ಸಂಭವಿಸುತ್ತಿರುವ ಪ್ರಕೃತಿ ವಿಕೋಪ, ಹಗಲಿರುಳು ದೇಶ ರಕ್ಷ ಣೆಯಲ್ಲಿ ಜಾಗೃತರಾಗಿರುವ ಯೋಧರ ಯೋಗಕ್ಷೇಮ ಹಾಗೂ ದೇಶದಲ್ಲಿ ಶಾಂತಿಯನ್ನು ಪ್ರಾರ್ಥಿಸಿ ನೆರವೇರಿಸುವ ಈ ಲಕ್ಷ ತುಳಸಿ ಅರ್ಚನೆಗೆ ಬೇಕಾಗುವ ತುಳಸಿಯನ್ನು ಶಿಷ್ಯ-ಭಕ್ತರು ತಂದೊದಗಿಸಿ ಶ್ರೀಕೃಷ್ಣ ಪರಮಾತ್ಮನ ಅನುಗ್ರಹಕ್ಕೆ ಪಾತ್ರರಾಗಲು ಕೋರಲಾಗಿದೆ.

ಮಧ್ಯಾಹ್ನ ಶ್ರೀಕೃಷ್ಣ ಜನ್ಮ ಪುರಾಣ ಪ್ರವಚನ ನಡೆಯಲಿದೆ. ರಾತ್ರಿ ಶ್ರೀಕೃಷ್ಣನಿಗೆ ವಿಶೇಷ ಪೂಜೆಯನ್ನು ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೆರವೇರಿಸಿ ಲೋಕಕಲ್ಯಾಣಾರ್ಥ ಪ್ರಾರ್ಥಿಸಲಿದ್ದಾರೆ. ವೈದಿಕರಿಂದ ಪುರುಷಸೂಕ್ತ ಪಾರಾಯಣ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಕ್ಕೆ ಭಕ್ತ ಮಹಾಜನರು ಆಗಮಿಸಿ ದೇವರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಮಠದ ಅಧ್ಯಕ್ಷ ವಿ.ಎನ್‌.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ