ಅಂಕೋಲಾ:ಸಮಾಜ ಅಭಿವೃದ್ಧಿಯಾಗಬೇಕಾದರೆ ಆರೋಗ್ಯ ಬಹುಮುಖ್ಯ. ಹೀಗಾಗಿ ಸರಕಾರ ಆರೋಗ್ಯ ಸೌಲಭ್ಯ ಒದಗಿಸಲು ಹಲವು ಯೋಜನೆ ಜಾರಿಗೆ ತಂದಿದ್ದು, ಅದರಲ್ಲಿ ಸಂಚಾರಿ ಆರೋಗ್ಯ ಘಟಕ ವಾಹನವೂ ಕೂಡ ಒಂದು ಎಂದು ಶಾಸಕ ಸತೀಶ ಸೈಲ್ ಹೇಳಿದರು.
ಪಟ್ಟಣದ ತಾಲೂಕು ಆಸ್ಪತ್ರೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ರಾಜೇಂದ್ರ ನಾಯ್ಕ, ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ, ಪುರಸಭೆ ಉಪಾಧ್ಯಕ್ಷ ಮಂಜುನಾಥ ನಾಯ್ಕ, ತಾಪಂ ಉಪಾಧ್ಯಕ್ಷೆ ತುಳಸಿ ಸುಕ್ರು ಗೌಡ, ಜಿಪಂ ಸದಸ್ಯೆ ಉಷಾ ಉದಯ ನಾಯ್ಕ ಮಾತನಾಡಿದರು.
ಸ್ಕೊಡವೇಸ್ ಸಂಸ್ಥೆ ಕಾರ್ಯದರ್ಶಿ ವೆಂಕಟೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾರಿ ಆರೋಗ್ಯ ಘಟಕದ ಸಂಯೋಜಕ ಜಿತೇಂದ್ರಕುಮಾರ ನಿರೂಪಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಅರ್ಚನಾ ನಾಯಕ ವಂದಿಸಿದರು. ಯೋಜನಾಧಿಕಾರಿ ಬಿ. ರಾಮಚಂದ್ರ ಭಟ್ ಉಪಸ್ಥಿತರಿದ್ದರು.