ಆ್ಯಪ್ನಗರ

ಎಸಿಬಿ ಬಲೆಗೆ ಜಿಲ್ಲಾಸ್ಪತ್ರೆ ಅಧಿಕಾರಿ

ಕಾರವಾರ : ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಜಿಲ್ಲಾ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಎಸ್‌. ಆರ್‌. ಪಾವಸ್ಕರ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಬಲೆಗೆ ಬಿದ್ದಿದ್ದಾರೆ.

Vijaya Karnataka 23 Aug 2019, 5:00 am
ಕಾರವಾರ : ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಜಿಲ್ಲಾ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಎಸ್‌. ಆರ್‌. ಪಾವಸ್ಕರ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಬಲೆಗೆ ಬಿದ್ದಿದ್ದಾರೆ.
Vijaya Karnataka Web acb trap district officer
ಎಸಿಬಿ ಬಲೆಗೆ ಜಿಲ್ಲಾಸ್ಪತ್ರೆ ಅಧಿಕಾರಿ


ಕುಸಿದು ಬಿದ್ದಿದ್ದ ಜಿಲ್ಲಾಸ್ಪತ್ರೆಯ ಕಂಪೌಂಡ್‌ ಗೋಡೆ ನಿರ್ಮಾಣ ಕಾಮಗಾರಿಯ ಬಿಲ್‌ ಪಾವತಿಸಲು ಪಾವಸ್ಕರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಗುತ್ತಿಗೆದಾರ ಸುಮೀತ್‌ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ಎಸಿಬಿ ಡಿವೈಎಸ್‌ಪಿ ಗಿರೀಶ ಎಸ್‌.ವಿ. ಸೂಚನೆಯಂತೆ ಗುತ್ತಿಗೆದಾರ ಸುಮೀತ ಅವರು ಪಾವಸ್ಕರಗೆ 10 ಸಾವಿರ ರೂ. ನೀಡುತ್ತಿದ್ದ ಸಂದರ್ಭ ಎಸಿಬಿ ಡಿವೈಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿದೆ. ದೂರವಾಣಿಯಲ್ಲಿ ಮಾತುಕತೆ ನಡೆಸಿರುವ ಆಡಿಯೋ ರಿಕಾರ್ಡ್‌ನ್ನು ಕೂಡ ಎಸಿಬಿ ಅಧಿಕಾರಿಗಳು ಪಡೆದುಕೊಂಡು ಕಚೇರಿಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆ ಸಹಾಯಕ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಲ್ಲಿ ಎಸ್‌. ಆರ್‌. ಪಾವಸ್ಕರ ಎಸಿಬಿ ಬಲೆಗೆ ಬಿದ್ದಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ