ಆ್ಯಪ್ನಗರ

ಮಕ್ಕಳ ಆಟದ ಅವಧಿ ಸಮರ್ಪಕ ಬಳಕೆ ಅವಶ್ಯ

ಭಟ್ಕಳ : ಶಾಲೆಯಲ್ಲಿ ಶಿಸ್ತು ಮೂಡಿಸುವಲ್ಲಿ ದೈಹಿಕ ಶಿಕ್ಷ ಕರ ಹೊಣೆಗಾರಿಕೆ ಮಹತ್ವದ್ದು ಎಂದು ಜಿಲ್ಲಾ ಶಿಕ್ಷ ಣ ಇಲಾಖೆ ಉಪನಿರ್ದೇಶಕ ಕಚೇರಿಯ ವಿಷಯ ಪರಿವೀಕ್ಷ ಕ ಎನ್‌.ಜಿ.ನಾಯ್ಕ ಹೇಳಿದರು.

Vijaya Karnataka 6 Jul 2019, 5:00 am
ಭಟ್ಕಳ : ಶಾಲೆಯಲ್ಲಿ ಶಿಸ್ತು ಮೂಡಿಸುವಲ್ಲಿ ದೈಹಿಕ ಶಿಕ್ಷ ಕರ ಹೊಣೆಗಾರಿಕೆ ಮಹತ್ವದ್ದು ಎಂದು ಜಿಲ್ಲಾ ಶಿಕ್ಷ ಣ ಇಲಾಖೆ ಉಪನಿರ್ದೇಶಕ ಕಚೇರಿಯ ವಿಷಯ ಪರಿವೀಕ್ಷ ಕ ಎನ್‌.ಜಿ.ನಾಯ್ಕ ಹೇಳಿದರು.
Vijaya Karnataka Web KWR-3BKL1


ಅವರು ತಾಲೂಕಿನ ದಿ ನ್ಯೂ ಇಂಗ್ಲಿಷ್‌ ಸ್ಕೂಲ್‌ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ದೈಹಿಕ ಶಿಕ್ಷ ಣ ಶಿಕ್ಷ ಕರ ಕಾರ್ಯಾಗಾರ ಹಾಗೂ ನಿವೃತ್ತ ದೈಹಿಕ ಶಿಕ್ಷ ಣ ಪರಿವೀಕ್ಷ ಕ ಶ್ರೀಕಾಂತ ನಾಯಕ್‌ರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೈಹಿಕ ಶಿಕ್ಷ ಕರು ಶಾಲೆಗಳಲ್ಲಿ ಮಕ್ಕಳ ಆಟದ ಅವಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಶಾಲೆಗಳಲ್ಲಿ ಕ್ರೀಡಾ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸ್ಕೌಟ್‌, ಗೈಡ್ಸ್‌ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದರು. ಸರಕು ಸಾಗಾಟ ವಾಹನದಲ್ಲಿ ವಿದ್ಯಾರ್ಥಿಗಳನ್ನು ಸಾಗಿಸದಂತೆ ನ್ಯಾಯಾಲಯ ಆದೇಶ ನೀಡಿದ್ದು, ಕ್ರೀಡಾಕೂಟ, ಪ್ರವಾಸದಂತಹ ಸಂದರ್ಭದಲ್ಲಿ ಆದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ದೈಹಿಕ ಶಿಕ್ಷಣ ಶಿಕ್ಷ ಕರ ಮೇಲೆ ಇದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರಶಿಕ್ಷ ಣಾಧಿಕಾರಿ ಎಮ್‌.ಆರ್‌.ಮುಂಜಿ ಮಾತನಾಡಿ, ತಾಲೂಕಿನಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟವನ್ನು ಸಂಘಟಿಸುವಲ್ಲಿ ನಿವೃತ್ತ ದೈಹಿಕ ಶಿಕ್ಷ ಣ ಪರಿವೀಕ್ಷ ಕ ಶ್ರೀಕಾಂತ ನಾಯಕ ಕಾರ್ಯ ಶ್ಲಾಘನೀಯವಾದುದು ಎಂದರು. ಭಟ್ಕಳ ಪ್ರಭಾರ ದೈಹಿಕ ಶಿಕ್ಷ ಣ ಪರಿವೀಕ್ಷ ಕ ದೇವರಾಯ ನಾಯಕ, ದೈಹಿಕ ಶಿಕ್ಷ ಣ ಶಿಕ್ಷ ಕ ಎಮ್‌.ಬಿ.ನಾಯ್ಕ, ಶಿಕ್ಷ ಕ ಗಣಪತಿ ಶಿರೂರು ಮಾತನಾಡಿದರು.

ಗೋಪಾಲ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌.ಜಿ.ಹೆಗಡೆ ಸ್ವಾಗತಿಸಿದರು. ಸುರೇಶ ನಾಯ್ಕ ವಂದಿಸಿದರು. ವಿ.ಜಿ.ಭಟ್‌ ಮತ್ತು ಮಧುಕರ ಹೆಗಡೇಕರ್‌ ಕಾರ್ಯಕ್ರಮ ನಿರೂಪಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ