ಆ್ಯಪ್ನಗರ

ಹಿಗ್ಗಿದ ಜಿಪಂ ಬಜೆಟ್‌

ಕಾರವಾರ : ಉತ್ತರ ಕನ್ನಡ ಜಿಲ್ಲಾಪಂಚಾಯಿತಿಯ 2020-21ನೇ ಸಾಲಿನ 1036 ಕೋಟಿ ರೂ. ಆಯವ್ಯಯವನ್ನು ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಶುಕ್ರವಾರ ಮಂಡಿಸಿದರು.

Vijaya Karnataka 30 May 2020, 5:00 am
ಕಾರವಾರ : ಉತ್ತರ ಕನ್ನಡ ಜಿಲ್ಲಾಪಂಚಾಯಿತಿಯ 2020-21ನೇ ಸಾಲಿನ 1036 ಕೋಟಿ ರೂ. ಆಯವ್ಯಯವನ್ನು ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಶುಕ್ರವಾರ ಮಂಡಿಸಿದರು.
Vijaya Karnataka Web an enlarged gp budget
ಹಿಗ್ಗಿದ ಜಿಪಂ ಬಜೆಟ್‌


ಜಿಪಂ ಸಭಾಂಗಣದಲ್ಲಿಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿಬಜೆಟ್‌ ಮಂಡಿಸಿದ ಅಧ್ಯಕ್ಷೆ, ಈ ಕರಡು ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ಒಪ್ಪಿಗೆ ನೀಡಿದೆ. ಈ ವರ್ಷ ಯೋಜನೆ ಲೆಕ್ಕ ಶೀರ್ಷಿಕೆ ಮತ್ತು ಯೋಜನೇತರ ಲೆಕ್ಕ ಶೀರ್ಷಿಕೆ ಎಂಬ ಪ್ರತ್ಯೇಕ ವಿಂಗಡಣೆ ಇಲ್ಲಎಂದು ತಿಳಿಸಿದರು.

ಬಜೆಟ್‌ ವಿವರ : ಜಿಪಂ ಕಾರ್ಯಕ್ರಮಗಳಿಗೆ 315.44 ಕೋಟಿ, ತಾಪಂ ಕಾರ್ಯಕ್ರಮಗಳಿಗೆ 720.31 ಕೋಟಿ ಹಾಗೂ ಗ್ರಾಪಂ ಕಾರ್ಯಕ್ರಮಗಳಿಗೆ 66 ಲಕ್ಷ ಒದಗಿಸಲಾಗಿದೆ. ಜಿಪಂ ಹಾಗೂ ಅಧೀನ ಇಲಾಖೆಗಳ ಸಿಬ್ಬಂದಿಯ ವೇತನಕ್ಕೆ 101.17 ಕೋಟಿ, ಹೊರ ಗುತ್ತಿಗೆ ನೌಕರರ ವೇತನಕ್ಕೆ 80.8 ಕೋಟಿ, ದಿನಗೂಲಿ ನೌಕರರ ವೇತನಕ್ಕೆ 77.04 ಲಕ್ಷ ಹಾಗೂ ಕಚೇರಿ ವೆಚ್ಚ, ಅಭಿವೃದ್ಧಿ ಕಾರ್ಯಗಳಿಗೆ 205.40 ಕೋಟಿಯನ್ನು ವಿಂಗಡಿಸಲಾಗಿದೆ ಎಂದು ಜಯಶ್ರೀ ಮೊಗೇರ ತಿಳಿಸಿದರು.

ಕೊರೊನಾ ವಾರಿಯರ್ಸ್‌ ಕಾರ‍್ಯ ಶ್ಲಾಘನೆ : ಕೊರೊನಾ ವಿರುದ್ಧ ಹೋರಾಡುತ್ತಿರುವವರ ಕುರಿತು ಸದಸ್ಯರಿಂದ ಶ್ಲಾಘನೆ ವ್ಯಕ್ತವಾಯಿತು. ಅಧಿಕಾರಿಗಳು, ಸಿಬ್ಬಂದಿ , ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ವೈದ್ಯರು , ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರು ಸಹ ಜೀವದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಸರ್ವ ಸದಸ್ಯರು ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದರು.

ಅಲ್ಲದೇ ಜಿಪಂ ಸಿಇಒ ಎಂ. ರೋಶನ್‌ ಅವರು ಭಟ್ಕಳದ ಆಸ್ಪತ್ರೆಗೆ ಭೇಟಿ ನೀಡಿ ಬಂದ ಬಗ್ಗೆ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಸ್ವಚ್ಛ ಭಾರತ ಅಭಿಯಾನದ ಎರಡನೇ ಹಂತದ ಕಾರ್ಯಕ್ರಮಗಳ ಬಗ್ಗೆ ಅಭಿಯಾನದ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಸೂರ್ಯನಾರಾಯಣ ಭಟ್‌ ಮಾಹಿತಿ ನೀಡಿದರು. ಸಭೆಯಲ್ಲಿಉಪಾಧ್ಯಕ್ಷ ಸಂತೋಷ ರೇಣಕೆ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಚೈತ್ರಾ ಕೊಠಾಕರ್‌, ಬಸವರಾಜ ದೊಡ್ಮನಿ, ಉಷಾ ನಾಯ್ಕ ಇದ್ದರು.

ಗುತ್ತಿಗೆದಾರರಿಗೆ ತೊಂದರೆಯಾಗದಂತೆ ಹಣ ಪಾವತಿ : ಜಿಲ್ಲೆಯಲ್ಲಿಕಳೆದ ಸಾಲಿನಲ್ಲಿಕೈಗೊಂಡಿರುವ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲಎಂದು ಕೆಲ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆದಾರರು ತಮ್ಮ ಬಿಲ್‌ ಪಾವತಿಯಾಗಿಲ್ಲಎಂದು ಪದೇಪದೆ ಕೇಳುತ್ತಿದ್ದಾರೆ. ಇದರಲ್ಲಿಲೋಪವಾಗಲು ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರಾದ ಆಲ್ಬರ್ಟ್‌ ಡಿಕೋಸ್ತ, ಗಜಾನನ ಪೈ, ಶಿವಾನಂದ ಹೆಗಡೆ ಮುಂತಾದವರು ಆಗ್ರಹಿಸಿದರು. ಪ್ರತಿಕ್ರಿಯೆ ನೀಡಿದ ಸಿಇಒ ಮೊಹಮ್ಮದ್‌ ರೋಶನ್‌, ಬಿಲ್‌ ಪಾವತಿ ವಿಳಂಬವಾಗಲು ಕಾರಣರಾದವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ. ಬಿಲ್‌ ಬಾಕಿಯಾಗದಂತೆ ಜಿಲ್ಲಾಪಂಚಾಯಿತಿಯೂ ಪ್ರಯತ್ನಿಸಿದೆ. ಗುತ್ತಿಗೆದಾರರಿಗೆ ತೊಂದರೆಯಾಗದಂತೆ ಹಣ ಪಾವತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ