ಆ್ಯಪ್ನಗರ

ಕಾನೂನು ಜೀವನದ ಅವಿಭಾಜ್ಯ ಅಂಗ

ಯಲ್ಲಾಪುರ : ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷ ಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ 'ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಾಮಾನ್ಯ ಕಾನೂನುಗಳ' ಕುರಿತು ಕಾನೂನು ಸಾಕ್ಷ ರತಾ ಕಾರ್ಯಕ್ರಮವು ಪಟ್ಟಣದ ಮದರ್‌ ಥೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ನಡೆಯಿತು.

Vijaya Karnataka 18 Jul 2019, 5:00 am
ಯಲ್ಲಾಪುರ : ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷ ಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ 'ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಾಮಾನ್ಯ ಕಾನೂನುಗಳ' ಕುರಿತು ಕಾನೂನು ಸಾಕ್ಷ ರತಾ ಕಾರ್ಯಕ್ರಮವು ಪಟ್ಟಣದ ಮದರ್‌ ಥೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ನಡೆಯಿತು.
Vijaya Karnataka Web an integral part of legal life
ಕಾನೂನು ಜೀವನದ ಅವಿಭಾಜ್ಯ ಅಂಗ


ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ವಿ.ಜೋಷಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಕಾನೂನಿನ ಅವಶ್ಯಕತೆ ಇದೆ. ಹತ್ತು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ಬದಲಾದ ಇಂದಿನ ದಿನಗಳಲ್ಲಿ ಪ್ರಜೆಗಳೂ ಕಾನೂನುಗಳ ಬಗ್ಗೆ ಅರಿವು ಹೊಂದಬೇಕಾದ ಅವಶ್ಯಕತೆ ಇದೆ. ವಿದ್ಯಾರ್ಥಿಗಳೂ ಕಾನೂನುಗಳ ಕುರಿತು ಜ್ಞಾನ ಹೊಂದಬೇಕು. ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನುಗಳ ಅರಿವು ಉಂಟಾದರೆ ನಂತರ ಪ್ರಬುದ್ಧ ವಯಸ್ಸಿಗೆ ಬಂದ ನಂತರ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿ ಸಮಾಜವನ್ನು ಸುಧಾರಿಸಲು ಮತ್ತು ಉತ್ತಮ ಸಮಾಜವನ್ನು ಕಟ್ಟಲು ಅನುಕೂಲವಾಗುತ್ತದೆ ಎಂದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿದ ನಂತರ ಯಾವುದೇ ವೃತ್ತಿಯನ್ನು ಕೈಗೊಂಡರೂ ಕಾನೂನಿನ ಪರಿಜ್ಞಾನ ಇರಬೇಕಾದ್ದು ಅತೀ ಅವಶ್ಯವಾಗಿದೆ. ಕಾನೂನುಗಳು ನಮ್ಮ ಜೀವನದ ಅವಿಭಾಜ್ಯ ಅಂಗಗಳಾಗಿವೆ ಎಂದರು.

ವಕೀಲರಾದ ಸರಸ್ವತಿ ಭಟ್ಟ ಅವರು ಸಾಮಾನ್ಯ ಕಾನೂನುಗಳ ಕುರಿತು ಉಪನ್ಯಾಸ ನೀಡಿದರು. ಮದರ್‌ ಥೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥ ರೋಯ್‌ಸ್ಟನ್‌ ಗೋನ್ಸಾವೇಸ್‌ ಅಧ್ಯಕ್ಷ ತೆ ವಹಿಸಿದ್ದರು. ಸಹಾಯಕ ಸರಕಾರಿ ಅಭಿಯೋಜಕ ಅಜಿತ್‌ ಜೆನ್ನಪ್ಪಾ ಜಿನಗೌಡರ್‌, ತಾಲೂಕಾ ಶಿಕ್ಷ ಣಾಧಿಕಾರಿ ಎನ್‌.ಆರ್‌.ಹೆಗಡೆ, ಎಎಸ್‌ಐ ಆನಂದ ಪಾವಸ್ಕರ್‌, ಹಿರಿಯ ವಕೀಲ ಎನ್‌.ಟಿ.ಗಾಂವ್ಕಾರ್‌ ಮುಂತಾದವರು ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ