ಆ್ಯಪ್ನಗರ

ಕಾರ್ಮಿಕರ ಸಂಘಟನೆ ಪ್ರತಿಭಟನೆ ವೇಳೆ ಅಂಗನವಾಡಿ ಸಹಾಯಕಿ ಸಾವು

ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57 )ಎಂಬುವವರೇ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ.

Vijaya Karnataka Web 8 Jan 2019, 3:51 pm
ಮುಂಡಗೋಡ: ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್‌ ಹಿನ್ನೆಲೆಯಲ್ಲಿ ಮಂಗಳವಾರ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮುಂಡಗೋಡಿನಲ್ಲಿ ನಡೆದಿದೆ.
Vijaya Karnataka Web Die


ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57 )ಎಂಬುವವರೇ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ.

ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಂತವ್ವ ತಾಲೂಕು ಪಂಚಾಯತಿ ಕಚೇರಿ ಎದುರು ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಸಹೋದ್ಯೋಗಿಯ ಸಾವಿಂದ ಆಘಾತಕ್ಕೆ ಒಳಗಾಗಿರುವ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ