ಆ್ಯಪ್ನಗರ

ಅಮದಳ್ಳಿಯಲ್ಲಿವಾರ್ಷಿಕ ಪ್ರತಿಭಾ ಪುರಸ್ಕಾರ

ಕಾರವಾರ : ಕಾರವಾರ ತಾಲೂಕಿನ ಅಮದಳ್ಳಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.

Vijaya Karnataka 10 Jan 2020, 5:00 am
ಕಾರವಾರ : ಕಾರವಾರ ತಾಲೂಕಿನ ಅಮದಳ್ಳಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.
Vijaya Karnataka Web annual talent award at amadalli
ಅಮದಳ್ಳಿಯಲ್ಲಿವಾರ್ಷಿಕ ಪ್ರತಿಭಾ ಪುರಸ್ಕಾರ


ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅವರು ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದ ಸಮಯ ಮತ್ತು ಘಟ್ಟ. ಈ ಸಮಯದಲ್ಲಿಏಕಾಗ್ರತೆಯಿಂದ ಕಲಿಯಬೇಕು. ವಿದ್ಯಾಭ್ಯಾಸ ಹೊರತು ಪಡಿಸಿ ಬೇರೆ ಕಡೆಗೆ ಗಮನ ಹರಿಸಬಾರದು. ಇಂದಿನ ಯುಗದಲ್ಲಿವಿದ್ಯಾಭ್ಯಾಸ ಅತ್ಯಮೂಲ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಂದೆ, ತಾಯಿ ಮತ್ತು ಗುರುಗಳನ್ನು ಗೌರವಿಸಬೇಕು. ಈ ಸಂಸ್ಕಾರವನ್ನು ಬಾಲ್ಯದಿಂದಲೇ ಮೈಗೂಡಿಸಿಕೊಂಡರೆ ಭವಿಷ್ಯದಲ್ಲಿಒಳ್ಳೆಯ ವ್ಯಕ್ತಿಯಾಗಲು ಸಾಧ್ಯ. ಪ್ರತಿಯೊಬ್ಬರೂ ಜೀವನದಲ್ಲಿಧೈರ್ಯವಂತರಾಗಬೇಕು, ಹೇಡಿಗಳಾಗಬಾರದು ಎಂತಹ ಸಮಸ್ಯೆಗಳು ಎದುರಾದರೂ ಅದನ್ನು ಎದುರಿಸುವ ಧೈರ್ಯ ಹೊಂದಿರಬೇಕು. ಹಾಗಿದ್ದರೆ ಮಾತ್ರ ಜೀವನದ ಗುರಿ ಮುಟ್ಟಲು ಸಾಧ್ಯ ಎಂದರು.

ಶಾಲೆಯ ವಾರ್ಷಿಕ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು. ನಂತರ ಸ್ಮಾರ್ಟ್‌ ಕ್ಲಾಸ್‌ ಶಿಕ್ಷಣ ಕೇಂದ್ರ ಮತ್ತು ಬಿಸಿಊಟದ ಅಡುಗೆ ಕೊಠಡಿಯನ್ನು ಶಾಸಕಿ ಉದ್ಘಾಟಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ