ಆ್ಯಪ್ನಗರ

ಶಿಷ್ಯವೇತನಕ್ಕೆ ಅರ್ಜಿಆಹ್ವಾನ

ಕಾರವಾರ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2019-20ನೇ ಸಾಲಿಗೆ ಕರ್ನಾಟಕ ಮೂಲ ನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ಹಾಗೂ ಕರ್ನಾಟಕದ ಪಿಂಚಣಿ ಇಲ್ಲದ ಹಾಗೂ ರಾಜ್ಯದಲ್ಲಿ ಈಗ ನೆಲೆಸಿರುವ ಹೊರ ರಾಜ್ಯಗಳ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.

Vijaya Karnataka 19 Jun 2019, 5:00 am
ಕಾರವಾರ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2019-20ನೇ ಸಾಲಿಗೆ ಕರ್ನಾಟಕ ಮೂಲ ನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ಹಾಗೂ ಕರ್ನಾಟಕದ ಪಿಂಚಣಿ ಇಲ್ಲದ ಹಾಗೂ ರಾಜ್ಯದಲ್ಲಿ ಈಗ ನೆಲೆಸಿರುವ ಹೊರ ರಾಜ್ಯಗಳ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.
Vijaya Karnataka Web apply for scholarship
ಶಿಷ್ಯವೇತನಕ್ಕೆ ಅರ್ಜಿಆಹ್ವಾನ


ಉತ್ತರ ಕನ್ನಡ ಜಿಲ್ಲೆಯಲ್ಲಿನ ಸರಕಾರದಿಂದ ಮಾನ್ಯತೆ ಪಡೆದ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು, ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರವಾರ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಗಷ್ಟ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಯನ್ನು ಉಪನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರವಾರ ದೂ.: 08382-226538 ಇವರನ್ನು ಸಂಪರ್ಕಿಸಿ ಪಡೆಯಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ