ಆ್ಯಪ್ನಗರ

ಉದ್ಯೋಗ ಬಡ್ತಿಯಲ್ಲಿಮೀಸಲಾತಿ, ಕೇಂದ್ರ ಮೇಲ್ಮನವಿ ಸಲ್ಲಿಸಲಿ

ಶಿರಸಿ: ಉದ್ಯೋಗ ಬಡ್ತಿಯಲ್ಲಿಮೀಸಲಾತಿ ಮೂಲಭೂತ ಹಕ್ಕಲ್ಲಎಂದು ಈಚೆಗೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಬ್ಲಾಕ್‌ ಕಾಂಗ್ರೆಸ್‌ನಿಂದ ಸೋಮವಾರ ಸಹಾಯಕ ಆಯುಕ್ತರ ಕಚೇರಿ ಮೂಲಕ ರಾಷ್ಟ್ರಪತಿಗೆ ಮನವಿ ಕಳುಹಿಸಲಾಯಿತು.

Vijaya Karnataka 18 Feb 2020, 5:00 am
ಶಿರಸಿ: ಉದ್ಯೋಗ ಬಡ್ತಿಯಲ್ಲಿಮೀಸಲಾತಿ ಮೂಲಭೂತ ಹಕ್ಕಲ್ಲಎಂದು ಈಚೆಗೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಬ್ಲಾಕ್‌ ಕಾಂಗ್ರೆಸ್‌ನಿಂದ ಸೋಮವಾರ ಸಹಾಯಕ ಆಯುಕ್ತರ ಕಚೇರಿ ಮೂಲಕ ರಾಷ್ಟ್ರಪತಿಗೆ ಮನವಿ ಕಳುಹಿಸಲಾಯಿತು.
Vijaya Karnataka Web appointments in employment promotion letter of central appeal
ಉದ್ಯೋಗ ಬಡ್ತಿಯಲ್ಲಿಮೀಸಲಾತಿ, ಕೇಂದ್ರ ಮೇಲ್ಮನವಿ ಸಲ್ಲಿಸಲಿ


ಸೋಮವಾರ ಸಹಾಯಕ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರಿಗೆ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಬಡ್ತಿ ಮೀಸಲಾತಿ ಮೂಲಭೂತ ಹಕ್ಕಲ್ಲಎಂದಿರುವುದರಿಂದ ಎಸ್‌ಸಿಎಸ್‌ಟಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಪಂಚಾಯಿತಿ ಸದಸ್ಯ ಬಸವರಾಜ ದೊಡ್ಮನಿ, ಯಾರೇ ಆದರೂ ಸಂವಿಧಾನದ ಆಶಯಗಳನ್ನು ಬದಲು ಮಾಡಲು ಸಾಧ್ಯವಿಲ್ಲ. ಅಗತ್ಯವಿರುವ ಮೂಲಭೂತ ಹಕ್ಕಿಗೆ ಉದ್ಯೋಗ ಪಡೆಯಬಹುದು ಎಂದು ಸಂವಿಧಾನ ಹೇಳಿರುವಾಗ ಕೋರ್ಟ ತೀರ್ಪಿನ ಕುರಿತು ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಆದ ಕಾರಣ ತೀರ್ಪನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವಂತೆ ಕೇಳಿಕೊಂಡು ಕೇಂದ್ರ ಸರ್ಕಾರ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಗದೀಶ ಗೌಡ, ಜಿಪಂ ಸದಸ್ಯ ಜಿ.ಎನ್‌.ಹೆಗಡೆ ಮುರೇಗಾರ, ಪಕ್ಷದ ಪರಿಶಿಷ್ಟ ವಿಭಾಗದ ಶೈಲೇಶ ಜೋಗಳೇಕರ್‌, ಹಿಂದುಳಿದ ವಿಭಾಗದ ಪ್ರಸನ್ನ ಶೆಟ್ಟಿ, ಅಲ್ಪಸಂಖ್ಯಾತ ವಿಭಾಗದ ಜಬಿವುಲ್ಲಾಖಾನ್‌, ಪ್ರಮುಖರಾದ ಅಬ್ಬಾಸ್‌ ತೋನ್ಸೆ, ಗೀತಾ ಭೋವಿ, ಭೀಮಪ್ಪ ಭೋವಿವಡ್ಡರ್‌, ಜಯಾ ನಾಯ್ಕ, ನಜೀರ್‌ ಮೂಡಿ, ಅಮರ ನೇರಲಕಟ್ಟೆ, ರುಬೇಕಾ ಫರ್ನಾಂಡಿಸ್‌, ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ