ಆ್ಯಪ್ನಗರ

‘ಅಸ್ನೋಟಿಕರ್‌ಗೆ ಕಾಂಗ್ರೆಸ್‌ ಬೆಂಬಲವಿದೆ’

ಗೋಕರ್ಣ : ಗೋಕರ್ಣದ ಬೇಲೆಹಿತ್ತಲದ ದಂಡೆಭಾಗದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಕುರಿತು ಭಾನುವಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆ ನಡೆಯಿತು.

Vijaya Karnataka 8 Apr 2019, 5:00 am
ಗೋಕರ್ಣ : ಗೋಕರ್ಣದ ಬೇಲೆಹಿತ್ತಲದ ದಂಡೆಭಾಗದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಕುರಿತು ಭಾನುವಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆ ನಡೆಯಿತು.
Vijaya Karnataka Web KWR-7 GKN 1 B
ಗೋಕರ್ಣದ ಬೇಲೆಹಿತ್ತಲದ ದಂಡೆಭಾಗದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಕುರಿತು ಸಭೆ ನಡೆಯಿತು.


ಜೆಡಿಎಸ್‌ ಮುಖಂಡ ಪ್ರದೀಪ್‌ ನಾಯಕ್‌ ಮಾತನಾಡಿ, ಮೈತ್ರಿ ಸರಕಾರದ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಅವರಿಗೆ ಕಾಂಗ್ರೆಸ್‌ ಬೆಂಬಲವಿದೆ ಎಂದರು. ಕಾಂಗ್ರೆಸ್‌ ಮುಖಂಡರಾದ ಶಾರದಾ ಶೆಟ್ಟಿ ಮಾತನಾಡಿ, ಈ ಬಾರಿ ಜೆಡಿಎಸ್‌ ಸರಕಾರದೊಂದಿಗೆ ಸೇರಿ ಎಲ್ಲ ರೀತಿ ಸ್ಪಂದಿಸುವಂತೆ ತಮ್ಮ ಕಾರ್ಯಕರ್ತರಲ್ಲಿ ತಿಳಿಸಿದರು.

ರಾಜ್ಯಸಭಾ ಮಾಜಿ ಸದಸ್ಯ ಕಮಲಾಕರ ಗೋಕರ್ಣ ಮಾತನಾಡಿ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಸೇರಿ ಆನಂದ ಅಸ್ನೋಟಿಕರ್‌ ಅವರನ್ನು ಗೆಲ್ಲಿಸಲೇ ಬೇಕು ಎಂದರು.

ಜೆಡಿಎಸ್‌ ಯುವಜಿಲ್ಲಾಧ್ಯಕ್ಷ ಭಾಸ್ಕರ್‌ ಪಟಗಾರ್‌ ಮಾತನಾಡಿ, ಆನಂದ ಅಸ್ನೋಟಿಕರ್‌ ಅವರನ್ನು ಬಹುಮತಗಳ ಅಂತರದಲ್ಲಿ ಗೆಲ್ಲಿಸುವ, ಕಾರ್ಯಕರ್ತರನ್ನು ಹುರಿದುಂಬಿಸುವ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಸೂರಜ್‌ ನಾಯ್ಕ ಸೋನಿ ಮಾತನಾಡಿ, ನಾವೂ ಪಕ್ಷ ದೊಂದಿಗೆ ಸೇರಿ ಕೆಲಸ ಮಾಡುತ್ತೇವೆ. ಸ್ಥಳೀಯ ಮುಖಂಡರ ಸಹಕಾರ ಕೂಡ ಬೇಕಿದೆ ಎಂದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಅಭಿವೃದ್ಧಿಯೇ ಕಾಣದ ಈ ಕ್ಷೇತ್ರವನ್ನು ಅಭಿವೃದ್ಧಿಯತ್ತ ತರಬೇಕು ಎಂದರು. ನೀಲಪ್ಪ ಗೌಡ, ತಾಲೂಕಾ ಕಾಂಗ್ರೆಸ್‌ ಪಕ್ಷ ದ ಅಧ್ಯಕ್ಷ ಎಲ್‌.ವಿ.ನಾಯ್ಕ, ಕಾಂಗ್ರೆಸ್‌ ಕಾರ್ಯಕರ್ತರು, ಜೆಡಿಎಸ್‌ ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ