ಆ್ಯಪ್ನಗರ

ಆಗಸ್ಟ್‌ ಒಳಗೆ ವಿಧಾನಸಭೆ ಚುನಾವಣೆ

ಹಳಿಯಾಳ : ಕಾಂಗ್ರೆಸ್‌ ಪಕ್ಷ ವನ್ನು ನಂಬಿದವರು ಉದ್ಧಾರವಾಗಿಲ್ಲ. ಜೆಡಿಎಸ್‌ ಪಕ್ಷ ದ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ನಂಬಿ ಬದುಕಿದವರಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದವರು ಜೆಡಿಎಸ್‌ ಅಭ್ಯರ್ಥಿಗಳನ್ನು ಮತ್ತು ಜೆಡಿಎಸ್‌ ಪಕ್ಷ ದವರು ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಮುಂಬರುವ ಆಗಸ್ಟ್‌ ತಿಂಗಳ ಒಳಗೆ ಮತ್ತೆ ರಾಜ್ಯದ ವಿಧಾನಸಭಾ ಚುನಾವಣೆ ನಡೆಸುವುದು ನಿಶ್ಚಿತ ಎಂದು ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು.

Vijaya Karnataka 12 Apr 2019, 5:00 am
ಹಳಿಯಾಳ : ಕಾಂಗ್ರೆಸ್‌ ಪಕ್ಷ ವನ್ನು ನಂಬಿದವರು ಉದ್ಧಾರವಾಗಿಲ್ಲ. ಜೆಡಿಎಸ್‌ ಪಕ್ಷ ದ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ನಂಬಿ ಬದುಕಿದವರಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದವರು ಜೆಡಿಎಸ್‌ ಅಭ್ಯರ್ಥಿಗಳನ್ನು ಮತ್ತು ಜೆಡಿಎಸ್‌ ಪಕ್ಷ ದವರು ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಮುಂಬರುವ ಆಗಸ್ಟ್‌ ತಿಂಗಳ ಒಳಗೆ ಮತ್ತೆ ರಾಜ್ಯದ ವಿಧಾನಸಭಾ ಚುನಾವಣೆ ನಡೆಸುವುದು ನಿಶ್ಚಿತ ಎಂದು ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು.
Vijaya Karnataka Web KWR-11  HLY 1


ಗುರುವಾರ ಲೋಕಸಭಾ ಚುನಾವಣೆಯ ಪ್ರಚಾರ ಕುರಿತು ತಾಲೂಕಿನ ತೇರಗಾಂವ, ಮುರ್ಕವಾಡ, ಕಾವಲವಾಡ, ಭಾಗವತಿ ಮತ್ತು ಕೆ.ಕೆ.ಹಳ್ಳಿ ಸೇರಿದಂತೆ ನಾಲ್ಕು ಜಿ.ಪಂ. ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ ನಡೆಸಿ ಮತಯಾಚಿಸಿ ಮಾತನಾಡಿದರು.

ಆಗಸ್ಟ್‌ ತಿಂಗಳಲ್ಲಿ ಮತ್ತೆ ರಾಜ್ಯದ ವಿಧಾನಸಭಾ ಚುನಾವಣೆಗಳು ನಡೆಯುತ್ತವೆ. ಅಲ್ಲದೇ ಹಳಿಯಾಳ ಜೋಯಿಡಾ ಮತಕ್ಷೇತ್ರದಲ್ಲಿ ಸುನೀಲ್‌ ಹೆಗಡೆ ಮರಳಿ ಎಂಎಲ್‌ಎ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ .ಜೆಡಿಎಸ್‌, ಕಾಂಗ್ರೆಸ್‌ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿವೆ. ರಾಜ್ಯದ ಸಮ್ಮಿಶ್ರ ಸರಕಾರದ ದಿನಗಣನೆ ಆರಂಭವಾಗಿದ್ದು, ದೇಶದ ಸುಭದ್ರತೆಗಾಗಿ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಿದರು.

ಉತ್ತರ ಕನ್ನಡ ಜಿಲ್ಲೆಯು ಕಾಂಗ್ರೆಸ್‌ ಮುಕ್ತವಾಗಿದ್ದರ ಪರಿಣಾಮ ಲೋಕಸಭೆಗೆ ಜೆಡಿಎಸ್‌ ಅಭ್ಯರ್ಥಿಯನ್ನು ಹಾಕಲಾಗಿದೆ. ಜನರು ಇಗಾಗಲೇ ಬಿಜೆಪಿಯ ಪರ ಮತ ಹಾಕಲು ನಿರ್ಧಾರ ಮಾಡಿದ್ದು ದೇಶದ ಮೂಲೆ ಮೂಲೆಯಲ್ಲಿಯೂ ಇಂತಹ ವಾತಾವರಣವನ್ನು ಕಾಣಬಹುದಾಗಿದೆ. ಜನರು ದೇಶದ ಸಂಸ್ಕೃತಿ ಮತ್ತು ಧರ್ಮ ರಕ್ಷ ಣೆ ಹಾಗೂ ಮೋದಿಯಿಂದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ತಿಳಿದು ಈ ಬಾರಿ ಮತ ಚಲಾಯಿಸಲಿದ್ದಾರೆ. ಅದರಲ್ಲಿಯೂ ಜಿಲ್ಲೆಯ ಜನರು ಪ್ರಜ್ಞಾವಂತರಾಗಿದ್ದು, ಅವರು ಈಗಾಗಲೇ ತೀರ್ಮಾನ ಕೈಗೊಂಡು ಮತ ಚಲಾಯಿಸಲು ಉತ್ಸುಕರಾಗಿದ್ದಾರೆ ಎಂದರು.

ಮಾಜಿ ಶಾಸಕ ಸುನೀಲ್‌ ಹೆಗಡೆ ಮಾತನಾಡಿ, ಮೈತ್ರಿ ಸರಕಾರವು ಜನರಿಗೆ ಬೇಡವಾಗಿದೆ. ರೈತರ ಸಾಲ ಮನ್ನಾ, ಅರಣ್ಯ ಅತಿಕ್ರಮಣದಾರರ ಸಮಸ್ಯೆ, ಮರಾಠಾ ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇನ್ನೂ ಹಲವಾರು ನ್ಯಾಯಯುತ ಬೇಡಿಕೆಗಳು ಈಡೇರಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವ ದೇಶಪಾಂಡೆ ಮತ್ತು ವಿ.ಪ. ಸದಸ್ಯ ಘೋಟ್ನೆಕರ ಜನರ ಸಮಸ್ಯೆಗಳಿಗೆ ಸ್ಪಂದಿಸದೇ ದ್ವೇಷದ ರಾಜಕಾರಣದಲ್ಲಿ ಮುಳುಗಿದ್ದಾರೆ. ಅಲ್ಲದೇ ನಾಲ್ಕು ವರ್ಷಕ್ಕೊಮ್ಮೆ ಪ್ರತ್ಯಕ್ಷ ನಾಗುವ ವ್ಯಕ್ತಿಯನ್ನು ಸ್ಪರ್ಧೆಗೆ ಇಳಿಸಿದ್ದು ಇದು ಸಮಬಲದ ಹೋರಾಟ ಅಲ್ಲ ಎಂದು ಹೇಳಿದರು.

ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮಂಗೇಶ ದೇಶಪಾಂಡೆ, ಅನಿಲ ಮುತ್ನಾಳೆ, ವಿ.ಎಸ್‌.ಪಾಟೀಲ್‌, ಬಸಣ್ಣ ಕುರುಬಗಟ್ಟಿ, ಅಜೋಬಾ ಕರಂಜೆಕರ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ