ಆ್ಯಪ್ನಗರ

ಸಿಎಂ ಕಾರ್ಯದರ್ಶಿಗಳ ರಾಜೀನಾಮೆ, ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನಲಾದ ರಹಸ್ಯ ಸಿಡಿ ಬಗ್ಗೆ ತನಿಖೆಯಾಗಲಿ: ಡಿಕೆಶಿ

ಮಂಡಳಿ ಪ್ರಾಧಿಕಾರ ಮೀಸಲಾತಿ ಹೆಸರಿನಲ್ಲಿ ಬಿಜೆಪಿಯವರು ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ.‌ ಈ ಕುರಿತು ಸಮಾಲೋಚನೆಗೆ ಕಾಂಗ್ರೆಸ್ ಮುಖಂಡರ ಸಭೆಯನ್ನು ನವೆಂಬರ್ 30ರಂದು ಕರೆಯಲಾಗಿದ್ದು ನಂತರ ಪಕ್ಷದ ನಿಲುವನ್ನು ತಿಳಿಸುತ್ತೇನೆ ಎಂದು ಹೇಳಿದರು.

Vijaya Karnataka Web 28 Nov 2020, 6:10 pm
ಶಿರಸಿ: ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿಯವರು ಸಮಾಜವನ್ನು ಭಾಗ ಮಾಡಲು ಹೊರಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದರು.
Vijaya Karnataka Web ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್


ಶಿರಸಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಂಡಳಿ ಪ್ರಾಧಿಕಾರ ಮೀಸಲಾತಿ ಹೆಸರಿನಲ್ಲಿ ಬಿಜೆಪಿಯವರು ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ.‌ ಈ ಕುರಿತು ಸಮಾಲೋಚನೆಗೆ ಕಾಂಗ್ರೆಸ್ ಮುಖಂಡರ ಸಭೆಯನ್ನು ನವೆಂಬರ್ 30ರಂದು ಕರೆಯಲಾಗಿದ್ದು ನಂತರ ಪಕ್ಷದ ನಿಲುವನ್ನು ತಿಳಿಸುತ್ತೇನೆ ಎಂದು ಹೇಳಿದರು.

ತನಿಖೆ ಆಗಲಿ....


ಜವಾಬ್ದಾರಿಯ ಸ್ಥಾನದಲ್ಲಿರುವ ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ಅದಕ್ಕೆ ತಕ್ಕಂತೆ ಹೇಳಿಕೆಗಳನ್ನು ನೀಡಲಿ. ಕಳೆದ ಅವಧಿಯ ಕಾಂಗ್ರೆಸ್ ಸರಕಾರ ಡ್ರಗ್ಸ್ ಹಣದಿಂದ ಎಂಬುದಾಗಿ ಸುಮ್ಮನೆ ಆರೋಪ ಮಾಡುವುದನ್ನು ಬಿಟ್ಟು ಬಿಜೆಪಿ ಸರಕಾರ ಸಮಗ್ರ ತನಿಖೆ ನಡೆಸಿ ಅದನ್ನು ಸಾಬೀತುಪಡಿಸಲು ಮುಂದಾಗಬೇಕು ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.

ವ್ಯಾಪಕ ತನಿಖೆಯಾಗಲಿ

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿದ್ದ ಒಬ್ಬರು ರಾಜೀನಾಮೆ ನೀಡಿದರೆ ಇನ್ನೊಬ್ಬರನ್ನು ತೆಗೆದುಹಾಕಲಾಯಿತು. ಈಗ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದಕ್ಕೆ ರಹಸ್ಯ ಸಿಡಿ ಕಾರಣ ಎಂಬ ಸಂಗತಿ ಕೇಳಿಬರುತ್ತಿದೆ. ಈ ಪ್ರಕರಣದ ಬಗ್ಗೆ ವ್ಯಾಪಕ ತನಿಖೆಯಾಗಿ ಸತ್ಯ ಸಂಗತಿ ಪ್ರಕಟವಾಗಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ