ಆ್ಯಪ್ನಗರ

ಗೆದ್ದ ಶಾಸಕರಿಗಷ್ಟೇ ಮಂತ್ರಿ ಭಾಗ್ಯ; ಕುತೂಹಲ ಕೆರಳಿಸಿದ ಈಶ್ವರಪ್ಪ ಹೇಳಿಕೆ

ಗೆದ್ದ ಶಾಸಕರಿಗಷ್ಟೇ ಸಚಿವ ಸ್ಥಾನ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು ಕುತೂಹಲ ಕೆರಳಿಸಿದೆ. ಈ ನಡುವೆ ಎಂಟಿಬಿ ನಾಗರಾಜ್ ಹಾಗೂ ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ.

Vijaya Karnataka Web 10 Dec 2019, 9:26 pm
ಉತ್ತರ ಕನ್ನಡ : ಉಪಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು, ಸೋತ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತಾಗಿ ಹೇಳಿಕೆ ನೀಡದೆ ಜಾರಿಕೊಂಡರು.
Vijaya Karnataka Web bjp minister ks eshwarappa statement on by election
ಗೆದ್ದ ಶಾಸಕರಿಗಷ್ಟೇ ಮಂತ್ರಿ ಭಾಗ್ಯ; ಕುತೂಹಲ ಕೆರಳಿಸಿದ ಈಶ್ವರಪ್ಪ ಹೇಳಿಕೆ


15 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ 13 ಅನರ್ಹ ಶಾಸಕರ ಪೈಕಿ 11 ಜನರು ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಗೆದ್ದ ಶಾಸಕರನ್ನು ಸಚಿವರನ್ನಾಗಿ ಮಾಡುವುದಾಗಿ ಸಿಎಂ ಬಿಎಸ್‌ವೈ ಅಭಯ ನೀಡಿದ್ದಾರೆ. ಆದರೆ ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್‌. ವಿಶ್ವನಾಥ್ ಸೋಲನುಭವಿಸಿದ್ದಾರೆ.

ಪರಾಜಿತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವ ಕುರಿತಾಗಿ ಬಿಜೆಪಿಯಲ್ಲಿ ಭಿನ್ನ ಅಭಿಪ್ರಾಯ ಕೇಳಿಬರುತ್ತಿದೆ. ಈಗಾಗಲೇ ಸಿಎಂ ಬಿಎಸ್‌ವೈ ಎಂಟಿಬಿ ನಾಗರಾಜ್ ಅವರ ಜೊತೆಗೆ ಮಾತುಕತೆ ನಡೆಸಿದ್ದು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಕೆ.ಎಸ್ ಈಶ್ವರಪ್ಪ ಭಿನ್ನ ಹೇಳಿಕೆ ನೀಡುವ ಮೂಲಕ ಕೇವಲ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ಎಂದಿರುವುದು ಕುತೂಹಲ ಕೆರಳಿಸಿದೆ.

ಕೆಪಿಸಿಸಿಗೆ ಹೊಸ ಸಾರಥಿ ಯಾರು ? ಡಿಕೆಶಿ v/s ಎಂಬಿಪಿ ಫೈಟ್ !

ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸಬೇಕು ಎಂದು ಕಳೆದ ವಿಧಾನಸಭೆ ಚುನಾವಣೆ ಅವಧಿಯಲ್ಲಿಯೇ ಮತದಾರರು ಆಸೆ ಪಟ್ಟಿದ್ದರು. ಅದಕ್ಕೆ ಪೂರಕವಾಗಿ ಇದೀಗ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಲ ನೀಡಿ ಸ್ಥಿರ ಸರಕಾರ ರಚನೆಗೆ ಕಾರಣರಾಗಿದ್ದಾರೆ. ಈ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಮತದಾರರು ಮತ್ತೊಮ್ಮೆ ತಿರಸ್ಕರಿಸಿದ್ದಾರೆ ಎಂದರು.

‘ಸಿದ್ದರಾಮಯ್ಯ ಕಾಂಗ್ರೆಸ್‌’ಗೆ ಹಿರಿಯರಿಂದ 'ರಿಪೇರಿ'! ಹೊಸ ವರ್ಷಕ್ಕೆ ಡಿಕೆಶಿ ಕೆಪಿಸಿಸಿ ಸಾರಥಿ?

ಕಾಂಗ್ರೆಸ್ ಮುಖಂಡರಲ್ಲಿ ಏಕತೆಯ ಕೊರತೆಯಿಂದಾಗಿ ಆ ಪಕ್ಷ ರಾಜ್ಯದಲ್ಲಿ ಮೂಲೆಗುಂಪಾಗುತ್ತಿದೆ. ಉಪ ಚುನಾವಣೆ ಪ್ರಚಾರದ ಉದ್ದಕ್ಕೂ ಕೇಂದ್ರ ಸರಕಾರ ಹಾಗೂ ಬಿಜೆಪಿ ನಾಯಕರನ್ನು ತೆಗಳುವ ಕಾರ್ಯದಲ್ಲಿಯೇ ಕಾಂಗ್ರೆಸ್ ಮುಖಂಡರು ನಿರತರಾಗಿದ್ದರು. ಇಂತಹ ರಾಜಕೀಯ ಪ್ರವೃತ್ತಿಯಿಂದಲೇ ಕಾಂಗ್ರೆಸ್ಸಿಗೆ ಸೋಲು ಉಂಟಾಗಿದೆ ಎಂದಿದ್ದಾರೆ.

ರಾಜ್ಯದ ಬಿಜೆಪಿ ಸರಕಾರಕ್ಕೆ ಬಹುಮತದ ಕೊರತೆಯಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ತೊಡಕು ಉಂಟಾಗಿತ್ತು. ಈಗ ರಾಜ್ಯದಲ್ಲಿ ಸ್ಥಿರ ಸರಕಾರ ರಚನೆ ಆಗಿದ್ದರಿಂದ ಬಿಜೆಪಿ ಹಿಂದೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ