ಆ್ಯಪ್ನಗರ

ಬೊಮ್ನಳ್ಳಿ : ಮೃತರ ಕುಟುಂಬಕ್ಕೆ ದೇಶಪಾಂಡೆ ಸಾಂತ್ವನ

ಹಳಿಯಾಳ : ಬಟ್ಟೆ ತೊಳೆಯಲು ಕಾಳಿ ನದಿಗೆ ತೆರಳಿ ಸೋಮವಾರ ಮೃತಪಟ್ಟಿದ್ದ ಬೊಮ್ನಳ್ಳಿ ಗ್ರಾಮದ ಗಾವಡೆ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಭೇಟಿ ನೀಡಿ ಸಾಂತ್ವನ ಹೇಳಿದರು.

Vijaya Karnataka 19 Dec 2018, 5:00 am
ಹಳಿಯಾಳ : ಬಟ್ಟೆ ತೊಳೆಯಲು ಕಾಳಿ ನದಿಗೆ ತೆರಳಿ ಸೋಮವಾರ ಮೃತಪಟ್ಟಿದ್ದ ಬೊಮ್ನಳ್ಳಿ ಗ್ರಾಮದ ಗಾವಡೆ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಭೇಟಿ ನೀಡಿ ಸಾಂತ್ವನ ಹೇಳಿದರು.
Vijaya Karnataka Web KWR-18 HLY 1


ಮಂಗಳವಾರ ಗ್ರಾಮಕ್ಕೆ ಆಗಮಿಸಿದ ಸಚಿವ ದೇಶಪಾಂಡೆ, ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆದಷ್ಟು ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.

ಶೌರ್ಯ ಪ್ರಶಸ್ತಿಗೆ ಪ್ರಸ್ತಾವನೆ : ಕಾಳಿ ನದಿಯಲ್ಲಿ ಮುಳುಗುತ್ತಿದ್ದ ಗಾವಡೆ ಕುಟುಂಬದ ಸದಸ್ಯರನ್ನು ರಕ್ಷಿಸಲು ನೀರಿಗೆ ಇಳಿದು ಅಂತಿಮವಾಗಿ ರಮೀಬಾಯಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಅದೇ ಗ್ರಾಮದ ಡೋಮಿಂಗ್‌ ಸಿದ್ದಿ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಹೆಸರನ್ನು ಶೌರ‍್ಯ ಪ್ರಶಸ್ತಿಗೆ ಶಿಫಾರಸು ಮಾಡಲು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಕಳಿಸುವುದಾಗಿ ತಿಳಿದರು.

ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ, ಎಡಿಶನಲ್‌ ಎಸ್ಪಿ ಡಾ. ಗೋಪಾಲ ಬ್ಯಾಕೋಡ್‌, ಜಿಪಂ ಸದಸ್ಯ ಕೃಷ್ಣಾ ಪಾಟೀಲ್‌, ತಹಸೀಲ್ದಾರ್‌ ವಿದ್ಯಾಧರ ಗುಳಗುಳಿ, ಸಿಪಿಐ ಬಿ.ಎಸ್‌.ಲೋಕಾಪೂರ, ಮುಖಂಡ ಸುಭಾಷ ಕೋರ್ವೆಕರ, ಬೊಮ್ಮು ಎಡಗೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ