ಆ್ಯಪ್ನಗರ

ಬಿಎಸ್ಸೆನ್ನೆಲ್‌ ಗುತ್ತಿಗೆ ನೌಕರರ ಪ್ರತಿಭಟನೆ

ಕಾರವಾರ : ಸಮರ್ಪಕವಾಗಿ ವೇತನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್‌ಎನ್‌ಎಲ್‌ ಗುತ್ತಿಗೆ ನೌಕರರ ಸಂಘಟನೆಯಿಂದ ಸಿಐಟಿಯು ನೇತೃತ್ವದಲ್ಲಿ ಗುರುವಾರ ಇಲ್ಲಿನ ಬಿಎಸ್‌ಎನ್‌ಎಲ್‌ ಉಪ ಪ್ರಧಾನ ವ್ಯವಸ್ಥಾಪಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

Vijaya Karnataka 18 Jan 2019, 5:00 am
ಕಾರವಾರ : ಸಮರ್ಪಕವಾಗಿ ವೇತನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್‌ಎನ್‌ಎಲ್‌ ಗುತ್ತಿಗೆ ನೌಕರರ ಸಂಘಟನೆಯಿಂದ ಸಿಐಟಿಯು ನೇತೃತ್ವದಲ್ಲಿ ಗುರುವಾರ ಇಲ್ಲಿನ ಬಿಎಸ್‌ಎನ್‌ಎಲ್‌ ಉಪ ಪ್ರಧಾನ ವ್ಯವಸ್ಥಾಪಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
Vijaya Karnataka Web KWR-17 GURUDATT 5


ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು, ಸಂಸ್ಥೆಯಲ್ಲಿ ಗುತ್ತಿಗೆ ನೌಕರರಿಗೆ ಕಳೆದ ಐದು ತಿಂಗಳಿಂದ ವೇತನ ನೀಡಿಲ್ಲ. ಬಾಕಿ ವೇತನವನ್ನು ಕೂಡಲೇ ನೀಡಬೇಕು. ಅಲ್ಲದೇ ಗುತ್ತಿಗೆ ನೌಕರರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

4ಜಿ ಸೇವೆ ನೀಡಲಿ : ಬಿಎಸ್‌ಎನ್‌ಎಲ್‌ ಇದುವರೆಗೂ 4 ಜಿ ಸೇವೆ ನೀಡುತ್ತಿಲ್ಲ, ಇದರಿಂದ ಖಾಸಗಿ ಮೊಬೈಲ್‌ಗಳ ಜತೆ ಸ್ಪರ್ಧೆ ನಡೆಸಲು ತೊಂದರೆಯಾಗಿದೆ. 4 ಸೇವೆಯನ್ನು ಶೀಘ್ರದಲ್ಲಿ ಆರಂಭಿಸುವ ಮೂಲಕ ಖಾಸಗಿ ಮೊಬೈಲ್‌ ಕಂಪನಿಗಳ ಸ್ಪರ್ಧೆಯನ್ನು ಎದುರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗುತ್ತಿಗೆ ನೌಕರರಿಗೆ ನಿಯಮದ ಪ್ರಕಾರ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಸಂಸ್ಥೆಯನ್ನು ಖಾಸಗೀಕರಣ ಮಾಡದೇ ಮತ್ತಷ್ಟು ಬೆಳೆಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಬಹುತೇಕ ತಾಲೂಕುಗಳಿಂದ ಆಗಮಿಸಿದ್ದ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಗುತ್ತಿಗೆ ನೌಕರರ ಸಂಘದ ಪ್ರಮುಖ ಆರ್‌.ಎನ್‌.ನಾಯಕ್‌, ಸಿಐಟಿಯು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಯಮುನಾ ಗಾಂವ್ಕರ್‌, ಜಿಲ್ಲಾ ಘಟಕದ ಕಾರ್ಯದರ್ಶಿ ಸಿ.ಆರ್‌.ಶಾನಭಾಗ, ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ