ಆ್ಯಪ್ನಗರ

ಅಂದಿನ ಪಾಠ ಅಂದೇ ಓದುವ ಹವ್ಯಾಸ ಬೆಳೆಸಿಕೊಳ್ಳಿ

ಕಾರವಾರ : ಶಾಲೆ ಪ್ರಾರಂಭವಾದ ದಿನದಿಂದಲೇ ಅಂದಿನ ಪಾಠವನ್ನು ಅಂದೇ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಸದಸ್ಯೆ ಚೈತ್ರಾ ಕೋಠಾರಕರ ಹೇಳಿದರು.

Vijaya Karnataka 31 May 2019, 5:00 am
ಕಾರವಾರ : ಶಾಲೆ ಪ್ರಾರಂಭವಾದ ದಿನದಿಂದಲೇ ಅಂದಿನ ಪಾಠವನ್ನು ಅಂದೇ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಸದಸ್ಯೆ ಚೈತ್ರಾ ಕೋಠಾರಕರ ಹೇಳಿದರು.
Vijaya Karnataka Web build a hobby that reads todays lesson
ಅಂದಿನ ಪಾಠ ಅಂದೇ ಓದುವ ಹವ್ಯಾಸ ಬೆಳೆಸಿಕೊಳ್ಳಿ


ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ಕಾರವಾರ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸ ಮಾಡುವ ರೂಢಿ ಬೆಳಸಿಕೊಂಡರೆ ಪರೀಕ್ಷಾ ಸಮಯದಲ್ಲಿ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಶಾಲಾ ಶಿಕ್ಷ ಕರು ಕೂಡಾ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಓದಲು ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದ ಕ್ಷೇತ್ರ ಶಿಕ್ಷ ಣಾಧಿಕಾರಿ ರಾಮಕೃಷ್ಣ ನಾಯಕ ಮಾತನಾಡಿ, ಮಕ್ಕಳಿಗೆ ನೀರಿನ ಸಮಸ್ಯೆಉಂಟಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಸಕ್ತ ಶೈಕ್ಷ ಣಿಕ ವರ್ಷದಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗುತ್ತಿದ್ದು, ಬಡವರಿಗೆ ಇದು ಸಹಕಾರಿಯಾಗಲಿದೆ. ಸಮಾಜದಲ್ಲಿನ ತಾರತಮ್ಯ ನಿವಾರಿಸಲು ನಾಂದಿ ಹಾಡಲಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತರಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಉತ್ತಮ ಭವಿಷ್ಯ ರೂಪಿಸಕೊಳ್ಳಬೇಕೆಂದು ಹೇಳಿದರು.

ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷ ಣಾಧಿಕಾರಿ ಲತಾ ನಾಯಕ, ಕಾರವಾರ ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹರಪನಹಳ್ಳಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ಹಾಗೂ ನಗರಸಭೆ ಮಾಜಿ ಸದಸ್ಯ ಪ್ರೇಮಾನಂದ ಗುನಗಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ