ಆ್ಯಪ್ನಗರ

ಅರಶಿಣಗೇರಿ ಗ್ರಾಮಕ್ಕೆ ಬಸ್‌ ಓಡಿಸಲು ಆಗ್ರಹ

ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮಕ್ಕೆ ಬಸ್‌ ಓಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಹಸೀಲ್ದಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು.

Vijaya Karnataka 24 Sep 2019, 5:00 am
ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮಕ್ಕೆ ಬಸ್‌ ಓಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಹಸೀಲ್ದಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು.
Vijaya Karnataka Web 23MND2-_24


ಮುಂಡಗೋಡನಿಂದ 12 ಕಿ.ಮೀ. ದೂರದಲ್ಲಿರುವ ಅರಶೀಣಗೇರಿ ಗ್ರಾಮದಿಂದ ಪ್ರತಿದಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ, ಕಾಲೇಜಗೆ ಬರುತ್ತಾರೆ. ಆದರೆ ಬಸ್‌ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ತೀವ್ರತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆ ಹಾಗೂ ವಿವಿಧ ಕೆಲಸ ಕಾರ‍್ಯಗಳಿಗೆ ಮುಂಡಗೋಡಕ್ಕೆ ಬರಲು ಜನರಿಗೂ ತೊಂದರೆ ಆಗುತ್ತಿದೆ. ಆದ್ದರಿಂದ ಅರಶಿಣಗೇರಿ ಗ್ರಾಮಕ್ಕೆ ಬಸ್‌ ಓಡಿಸುವಂತೆ ಸಾರಿಗೆ ಇಲಾಖೆಯವರಿಗೆ ಸೂಚಿಸಬೇಕು ಎಂದು ಅವರು ನೀಡಿದ ಮನವಿಯಲ್ಲಿತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಾದ ಕೆ.ಎ.ರವಿ ವಡಗಟ್ಟ, ಕಾಳಪ್ಪ ಲಮಾಣಿ, ರಜ್ಜಿ ಪಿಲಿಫ್ಸ್‌, ಅಶೋಕ ಗೌಡ, ಸಂತೋಷ ಲಮಾಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ