ಅಂಕೋಲಾ : ತಾಲೂಕಿನ ಹಾರವಾಡ ಬಳಿ ಬುಧವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಗುರುತಿಸುವ ಕಾರ್ಯ ನಡೆದಿದೆ. ಮೃತರಲ್ಲಿ ಬೆಂಗಳೂರಿನ ಜೆಪಿ ನಗರದ ರಮೇಶ ಕೆ ಹಾಗೂ ದೊಡ್ಡಬಳ್ಳಾಪುರದ ಪಾಲಜೋಗನಹಳ್ಳಿಯ ಕೆ. ರಮೇಶ ಸೇರಿದ್ದಾರೆ. ಕಾರವಾರಕ್ಕೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವಾಹನ ಒಡಿಸ್ಸಾ ಮೂಲದ್ದಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ತಹಸೀಲ್ದಾರ ವಿವೇಕ ಶೇಣ್ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಗುರುತಿಸುವ ಕಾರ್ಯ ನಡೆದಿದೆ. ಮೃತರಲ್ಲಿ ಬೆಂಗಳೂರಿನ ಜೆಪಿ ನಗರದ ರಮೇಶ ಕೆ ಹಾಗೂ ದೊಡ್ಡಬಳ್ಳಾಪುರದ ಪಾಲಜೋಗನಹಳ್ಳಿಯ ಕೆ. ರಮೇಶ ಸೇರಿದ್ದಾರೆ. ಕಾರವಾರಕ್ಕೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವಾಹನ ಒಡಿಸ್ಸಾ ಮೂಲದ್ದಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ತಹಸೀಲ್ದಾರ ವಿವೇಕ ಶೇಣ್ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.