ಆ್ಯಪ್ನಗರ

ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌ ಕಾರು ಅಪಘಾತ: ದೇವರ ದರ್ಶನ ಪಡೆದು ಮರಳುವಾಗ ದುರಂತ

ಗೋಕರ್ಣಕ್ಕೆ ತಮ್ಮ ಫಾರ್ಚೂನರ್‌ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹೊಸಕಂಬಿ ಬಳಿ ರಾಷ್ಟ್ರೀಯ ಹೆದ್ದಾರಿಯಿಂದ ಗೋಕರ್ಣಕ್ಕೆ ತೆರಳುವ ರಸ್ತೆಯ ತಿರುವಿನಲ್ಲಿಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

Vijaya Karnataka Web 12 Jan 2021, 6:53 pm
ಕಾರವಾರ: ಗೋಕರ್ಣ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯಕ್‌ ಅವರ ಪತ್ನಿ ಹಾಗೂ ಆಪ್ತ ಸಹಾಯಕರು ನಿಧನರಾಗಿದ್ದಾರೆ. ಆದರೆ ಕಾರು ಅಪಘಾತ ಸಂಭವಿಸುವುದಕ್ಕೂ ಮುನ್ನ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಈ ದಂಪತಿ ಪಾಲ್ಗೊಂಡಿದ್ದರು.
Vijaya Karnataka Web ಉತ್ತರ ಕನ್ನಡದ  ಯಲ್ಲಾಪುರದಲ್ಲಿ ಸೋಮವಾರ ಬೆಳಿಗ್ಗೆ ಉಸ್ತುವಾರಿ ಸಚಿವರಿಂದ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರಿಗೆ ಸ್ವಾಗತ
ಉತ್ತರ ಕನ್ನಡದ ಯಲ್ಲಾಪುರದಲ್ಲಿ ಸೋಮವಾರ ಬೆಳಿಗ್ಗೆ ಉಸ್ತುವಾರಿ ಸಚಿವರಿಂದ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರಿಗೆ ಸ್ವಾಗತ


ಅಪಘಾತಕ್ಕೂ ಮುನ್ನ ಕೇಂದ್ರ ಆಯುಷ್‌ ಖಾತೆ ಸಚಿವ ಶ್ರೀಪಾದ ನಾಯಕ್‌ ಅವರು ತಮ್ಮ ಕುಟುಂಬದವರೊಂದಿಗೆ ಸೋಮವಾರ ಯಲ್ಲಾಪುರ ತಾಲೂಕಿನ ಗಂಟೆಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಚಿವ ಶಿವರಾಮ ಹೆಬ್ಬಾರ ಮತ್ತು ವಿಪ ಸದಸ್ಯ ಶಾಂತಾರಾಮ ಸಿದ್ದಿ ಮೊದಲಾದ ಗಣ್ಯರನ್ನು ಭೇಟಿ ಮಾಡಿದ್ದರು.

ಅಲ್ಲಿಂದ ಉತ್ತರ ಕನ್ನಡದ ಗೋಕರ್ಣಕ್ಕೆ ತಮ್ಮ ಫಾರ್ಚೂನರ್‌ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹೊಸಕಂಬಿ ಬಳಿ ರಾಷ್ಟ್ರೀಯ ಹೆದ್ದಾರಿಯಿಂದ ಗೋಕರ್ಣಕ್ಕೆ ತೆರಳುವ ರಸ್ತೆಯ ತಿರುವಿನಲ್ಲಿಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿಜಯಾ ನಾಯಕ್‌ ಹಾಗೂ ಸಚಿವರ ಆಪ್ತ ಸಹಾಯಕ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಸಚಿವ ಶ್ರೀಪಾದ ನಾಯಕ್‌ ಅವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಇಬ್ಬರು ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿದಾಖಲಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಆಸ್ಪತ್ರೆಯಲ್ಲಿ ಸೇರಿದ್ದರು. ಅಪಘಾತದ ಸುದ್ದಿ ಸ್ಥಳೀಯರು ಮತ್ತು ಅಭಿಮಾನಿಗಳು, ಕಾರ್ಯಕರ್ತರಿಗೆ ತೀವ್ರ ಆಘಾತ ಉಂಟುಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ