ಆ್ಯಪ್ನಗರ

ಕೇಂದ್ರ ಭರಿಸದ ನರೇಗಾ ಹಣ: ಸಚಿವ ಭೈರೇಗೌಡ

ಅಂಕೋಲಾ :ನರೇಗಾ ಕೂಲಿ ಕಾರ್ಮಿಕರಿಗೆ ರಾಜ್ಯ ಸರಕಾರ ಭರಿಸಿದ ಹಣವನ್ನು ವರ್ಷ ಕಳೆದರೂ ಕೇಂದ್ರ ಸರಕಾರ ಕೊಟ್ಟಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮತ್ತು ಕಾನೂನು ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದರು.

Vijaya Karnataka 26 Jul 2018, 5:00 am
ಅಂಕೋಲಾ :ನರೇಗಾ ಕೂಲಿ ಕಾರ್ಮಿಕರಿಗೆ ರಾಜ್ಯ ಸರಕಾರ ಭರಿಸಿದ ಹಣವನ್ನು ವರ್ಷ ಕಳೆದರೂ ಕೇಂದ್ರ ಸರಕಾರ ಕೊಟ್ಟಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮತ್ತು ಕಾನೂನು ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದರು.
Vijaya Karnataka Web central should bere narega money
ಕೇಂದ್ರ ಭರಿಸದ ನರೇಗಾ ಹಣ: ಸಚಿವ ಭೈರೇಗೌಡ


ಅವರು ತಾಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿ ಮಾಧ್ಯಮದೊಂದಿಗೆ ಮಾತನಾಡಿ, ''ಕೂಲಿ ಕಾರ್ಮಿಕರಿಗೆ ರಾಜ್ಯ ಸರಕಾರ 1,090 ಕೋಟಿ ರೂ.ಪಾವತಿಸಿತ್ತು.ಅದನ್ನು ಕೇಂದ್ರ ಸರಕಾರ ಇನ್ನೂ ಪಾವತಿಸಿಲ್ಲ'' ಎಂದರು.

''ಎರಡು ವರ್ಷ ಹಿಂದೆ ಮೂರ್ನಾಲ್ಕು ತಿಂಗಳು ಕೂಲಿ ನೀಡಲು ಅನಾನುಕೂಲ ಆಗಿತ್ತು. ಆದರೆ ಕಾರ್ಮಿಕರಿಗೆ ಸಮಸ್ಯೆ ಆಗಬಾರದು ಎಂದು ರಾಜ್ಯ ಸರಕಾರದಿಂದಲೇ ಪಾವತಿಸಿದ್ದೆವು. ಆ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಿಗೆ ಒತ್ತಾಯಿಸಿದ್ದೇವೆ'' ಎಂದರು.

''ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಮುಂಬಡ್ತಿ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ತೀರ್ಪು ಬರೋವರೆಗೆ ಏನು ಮಾಡುವುದು ಸೂಕ್ತವಲ್ಲ ಎಂದು ಅಡ್ವೋಕೇಟ್‌ ಜನರಲ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ'' ಎಂದರು.

ಲೋಕಸಭೆಗೆ ಮೈತ್ರಿ

''ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿಯಲ್ಲಿ ಚರ್ಚಿಸಿ ಲೋಕಸಭೆ ಚುನಾವಣೆಗೆ ಅವಶ್ಯಕತೆ ಇದ್ದಲ್ಲಿ ಅನ್ಯಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ರಾಜ್ಯದಲ್ಲಿಯೂ ಹೊಂದಾಣಿಕೆಗೆ ತೀರ್ಮಾನ ಆಗಿದೆ. ಅದನ್ನು ಸ್ವಾಗತಿಸುತ್ತೇವೆ'' ಎಂದರು.

''ಮೈತ್ರಿ ಮಾಡಿಕೊಂಡಾಗ ನಷ್ಟ ಕಷ್ಟ ಇದ್ದೇ ಇರುತ್ತೆ. ಆದರೆ ಅದೆಲ್ಲವನ್ನು ಸಹಿಸಿಕೊಂಡು ಹೋಗುವ ಅನಿವಾರ್ಯತೆ ಇದೆ'' ಎಂದರು.

''ಮುಂಬರುವ ಚುನಾವಣೆಯಲ್ಲಿ ದೇಶದಲ್ಲಿ ಪರ್ಯಾಯ ಸರಕಾರ ತರಬೇಕೆಂಬ ಮನಸ್ಥಿತಿ ಕಾಂಗ್ರೆಸ್‌ ಹಾಗೂ ಇತರೆ ಪಕ್ಷ ಗಳಲ್ಲಿ ಇದೆ. ಎಲ್ಲ ಪ್ರತಿಪಕ್ಷ ಗಳು ಕೂಡ ಇದೇ ಚಿಂತನೆಯಲ್ಲಿರುವುದರಿಂದ ರಾಜ್ಯದಲ್ಲೂ ಮೈತ್ರಿ ಮುಂದುವರಿಯುತ್ತದೆ'' ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ