ಆ್ಯಪ್ನಗರ

ಜಿಲ್ಲೆಗೆ ಹೆಚ್ಚಿನ ಪರಿಹಾರಕ್ಕೆ ಸಿಎಂಗೆ ಮನವಿ

ಶಿರಸಿ: ಜಿಲ್ಲೆಯಲ್ಲಿಅತಿವೃಷ್ಟಿಯಿಂದಾದ ಹಾನಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿಜಿಲ್ಲೆಯ ವಿಧಾನಸಭಾ ಸದಸ್ಯರು ಮತ್ತು ಬಿಜೆಪಿ ಪ್ರಮುಖರನ್ನು ಒಳಗೊಂಡ ನಿಯೋಗ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿತು.

Vijaya Karnataka 10 Sep 2019, 5:00 am
ಶಿರಸಿ: ಜಿಲ್ಲೆಯಲ್ಲಿಅತಿವೃಷ್ಟಿಯಿಂದಾದ ಹಾನಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿಜಿಲ್ಲೆಯ ವಿಧಾನಸಭಾ ಸದಸ್ಯರು ಮತ್ತು ಬಿಜೆಪಿ ಪ್ರಮುಖರನ್ನು ಒಳಗೊಂಡ ನಿಯೋಗ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿತು.
Vijaya Karnataka Web cm appeals to the district for greater relief
ಜಿಲ್ಲೆಗೆ ಹೆಚ್ಚಿನ ಪರಿಹಾರಕ್ಕೆ ಸಿಎಂಗೆ ಮನವಿ


ಪ್ರವಾಹದಿಂದ ಖಾಸಗಿ ಆಸ್ತಿ-ಪಾಸ್ತಿ ನಷ್ಟ, ರಸ್ತೆಗಳು, ಸೇತುವೆಗಳು ಕೊಚ್ಚಿಹೋಗಿದೆ ಎಂಬುದನ್ನು ಸಿಎಂ ಗಮನಕ್ಕೆ ತರಲಾಯಿತು. ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲು ಸಾಧ್ಯವಾಗದ್ದಕ್ಕೆ ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿಜಿಲ್ಲೆಗೆ ಭೇಟಿ ನೀಡುವುದಾಗಿ ಆಶ್ವಾಸನೆ ನೀಡಿದರು. ಜಿಲ್ಲೆಯ ಪರಿಸ್ಥಿತಿಯನ್ನು ಪರಿಗಣಿಸಿ ಹೆಚ್ಚಿನ ನೆರೆ ಪರಿಹಾರವನ್ನು ಬಿಡುಗಡೆಗೊಳಿಸುವ ಭರವಸೆ ನಿಯೋಗಕ್ಕೆ ನೀಡಿದರು. ಈ ಸಂದರ್ಭದಲ್ಲಿಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ, ಬಿ.ಜೆ.ಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ, ಮಾಜಿ ಶಾಸಕರಾದ ಸುನಿಲ ಹೆಗಡೆ, ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ಎನ್‌.ಎಸ್‌.ಹೆಗಡೆ, ವೆಂಕಟೇಶ ನಾಯಕ ಮುಂತಾದವರು ನಿಯೋಗದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ