ಆ್ಯಪ್ನಗರ

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಡಿಸಿ ಆದೇಶ

ಹಳಿಯಾಳ : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಹಾಗೂ ಮುಂದಿನ ದಿನಗಳಲ್ಲಿ ಮಳೆಯು ಉಂಟಾಗಿ ಪ್ರಕೃತಿ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮಗಳನ್ನು ನಿರ್ವಹಿಸಲು ಅಧಿಕಾರಿಗಳು ತಯಾರಿ ನಡೆಸಬೇಕಾಗಿದ್ದು ಎಲ್ಲ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದರು.

Vijaya Karnataka 2 Jun 2019, 5:00 am
ಹಳಿಯಾಳ : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಹಾಗೂ ಮುಂದಿನ ದಿನಗಳಲ್ಲಿ ಮಳೆಯು ಉಂಟಾಗಿ ಪ್ರಕೃತಿ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮಗಳನ್ನು ನಿರ್ವಹಿಸಲು ಅಧಿಕಾರಿಗಳು ತಯಾರಿ ನಡೆಸಬೇಕಾಗಿದ್ದು ಎಲ್ಲ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದರು.
Vijaya Karnataka Web KWR-01 HLY 1


ಶನಿವಾರ ಮುಂಜಾನೆ ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬೇಸಿಗೆಯ ಬಿಸಿಲು ಮುಂದಿನ ಎರಡು ವಾರಗಳಲ್ಲಿ ಹೆಚ್ಚುವ ಸಾಧ್ಯತೆಗಳಿವೆ. ಅದಕ್ಕಾಗಿ ಗ್ರಾಮೀಣ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ದಾಸ್ತಾನು ಇತ್ಯಾದಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸರಕಾರವು ಜಿಲ್ಲಾಡಳಿತಕ್ಕೆ ಈಗಾಗಲೇ ಹಣಕಾಸಿನ ನೆರವನ್ನು ಕಲ್ಪಿಸಿದ್ದು, ಅವಶ್ಯವಿದ್ದರೆ ಹಣ ಬಿಡುಗಡೆ ಮಾಡಲಾಗುವುದೆಂದು ಹೇಳಿದರು.

ಒಂದು ಕಡೆ ಕುಡಿಯುವ ನೀರಿನ ಅಭಾವ, ಇನ್ನೊಂದು ಕಡೆ ಅಕಾಲಿಕ ಮಳೆಯು ಬೆಳೆ, ಜೀವ ಮತ್ತು ಇನ್ನಿತರ ಹಾನಿಗಳನ್ನು ಮಾಡಬಹುದಾಗಿದೆ. ಆದ್ದರಿಂದ ಪ್ರಕೃತಿ ವಿಕೋಪ ತಡೆಗೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಗ್ರಾಮೀಣ ಭಾಗದಲ್ಲಿರುವ ಶುದ್ಧ ನೀರಿನ ಘಟಕಗಳನ್ನು ಆದಷ್ಟು ಬೇಗ ದುರಸ್ತಿ ಮಾಡಿ ಅವುಗಳಿಂದ ನಾಗರಿಕರಿಗೆ ಶುದ್ಧ ನೀರು ಸಿಗುವಂತೆ ಮಾಡಲು ಆಯಾ ಪಿಡಿಒಗಳು ಶ್ರಮಿಸಬೇಕಾಗಿದೆ. ಮುಂದಿನ 15 ದಿನಗಳ ಕಾಲ ಅಧಿಕಾರಿಗಳು ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡರೆ ಮಾತ್ರ ಸಮಸ್ಯೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು.

ಬೆಳೆ ಹಾನಿ ಸಂಭವಿಸಿದರೆ ಕಂದಾಯ ಮತ್ತು ತೋಟಗಾರಿಕಾ ಇಲಾಖೆಯವರು ತಕ್ಷ ಣ ಕಾರ್ಯಪ್ರವೃತ್ತರಾಗಿ ಜಂಟಿ ಸಮೀಕ್ಷೆಗಳನ್ನು ಕೈಗೊಂಡು ಸರಕಾರಕ್ಕೆ ವರದಿಯನ್ನು ರವಾನಿಸಬೇಕಾಗುತ್ತದೆ. ಈಗಾಗಲೇ ಹಳಿಯಾಳದ ತಹಸೀಲ್ದಾರ ಶಿವಾನಂದ ಉಳ್ಳೇಗಡ್ಡಿ ಅವರು ಕೇವಲ 48 ಗಂಟೆಗಳಲ್ಲಿ ಸಿಡಿಲು ಬಡಿದ ರೈತನ ಮನೆ ಬಾಗಿಲಿಗೆ 5 ಲಕ್ಷ ರೂ. ಪರಿಹಾರದ ಚೆಕ್‌ ವಿತರಿಸಿದ್ದು, ಇನ್ನುಳಿದ ಅಧಿಕಾರಿಗಳು ಸಹ ಜೀವ ಹಾನಿ ಸಂಭವಿಸಿದಾಗ ತಕ್ಷ ಣ ಪರಿಹಾರ ನೀಡುವ ಸೇವೆಗೆ ಮುಂದಾಗಬೇಕಾಗಿದೆ ಎಂದರು.

ಮರಳುಗಾರಿಕೆಯ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ತಹಸೀಲ್ದಾರ ಸಂಜಯ ಕಾಂಬ್ಳೆ ಅವರಿಗೆ ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆದರೂ ಇದುವರೆಗೂ ಯಾವುದೇ ಕ್ರಮಗಳನ್ನು ಜರುಗಿಸದೇ ಜಾಣ ಮೌನ ವಹಿಸಿದ್ದು ಯಾಕೆ? ಕೆಳ ಮಟ್ಟದಲ್ಲಿ ಮಾಹಿತಿಗಳನ್ನು ಸಂಗ್ರಹಿಸಿ ದಾಳಿ ನಡೆಸಿ ಅದನ್ನು ತಡೆಯುವಲ್ಲಿ ವಿಫಲರಾದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುವುದೆಂದು ವೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಸಭೆಯಲ್ಲಿ ತಹಸೀಲ್ದಾರಗಳಾದ ಹಳಿಯಾಳದ ಶಿವಾನಂದ ಉಳ್ಳೇಗಡ್ಡಿ, ದಾಂಡೇಲಿಯ ಚಾಮರಾಜ ಪಾಟೀಲ್‌, ತಾ.ಪಂ. ಅಧಿಕಾರಿ ಡಾ.ಮಹೇಶ ಕುರಿಯವರ ಸೇರಿದಂತೆ ಮೂರು ತಾಲೂಕುಗಳ 50ಕ್ಕೂ ಅಧಿಕ ಅಧಿಕಾರಿಗಳು ಭಾಗವಹಿಸಿದ್ದರು.


ಜೊಯಿಡಾ ತಹಸೀಲ್ದಾರಗೆ ತರಾಟೆ : ಹಳಿಯಾಳ, ಜೊಯಿಡಾ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಅಕ್ರಮ ಮರಳುಗಾರಿಕೆ ಅಧಿಕವಾಗಿದ್ದು, ಅವುಗಳನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕುರಿತು ಮರಳು ದೊರೆಯುವ ಜೊಯಿಡಾ ತಹಸೀಲ್ದಾರ ಸಂಜಯ ಕಾಂಬ್ಳೆ ಅವರನ್ನು ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡು ಅಕ್ರಮ ಮರಳುಗಾರಿಕೆಯಿಂದ ನೈಸರ್ಗಿಕ ಶಕ್ತಿ ಕುಂದುತ್ತಿದೆ. ತಕ್ಷ ಣ ಕಾರ್ಯಾಚರಣೆ ನಡೆಸಿ ಅಕ್ರಮ ಮರಳುಗಾರಿಕೆಯನ್ನು ನಿಯಂತ್ರಿಸಬೇಕು. ಈ ಬಗ್ಗೆ ವರದಿ ನೀಡುವ ಬದಲು ಕಾನೂನು ಕ್ರಮ ಕೈಗೊಂಡಿದ್ದರ ಬಗ್ಗೆ ಗಮನ ಸೆಳೆಯಲು ತಾಕೀತು ಮಾಡಿ, ಮುಂದಿನ ದಿನಗಳಲ್ಲಿ ಮುಂದುವರೆದರೆ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸುವುದು ಗ್ಯಾರಂಟಿ ಎಂದು ಡಿಸಿ ಗುಡುಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ