ಆ್ಯಪ್ನಗರ

ಚುನಾವಣೆ ಸಿದ್ಧತೆ ಪರಿಶೀಲಿಸಿದ ಡಿಸಿ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನಕ್ಕೆ ನಡೆದಿರುವ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಹರೀಶ್‌ಕುಮಾರ್‌ ಕೆ. ಗುರುವಾರ ಪರಿಶೀಲಿಸಿದರು.

Vijaya Karnataka 19 Apr 2019, 5:00 am
ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನಕ್ಕೆ ನಡೆದಿರುವ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಹರೀಶ್‌ಕುಮಾರ್‌ ಕೆ. ಗುರುವಾರ ಪರಿಶೀಲಿಸಿದರು.
Vijaya Karnataka Web dc prepares for election preparation
ಚುನಾವಣೆ ಸಿದ್ಧತೆ ಪರಿಶೀಲಿಸಿದ ಡಿಸಿ


ಹಳಿಯಾಳ, ಯಲ್ಲಾಪುರ ಹಾಗೂ ಶಿರಸಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ ಅವರು, ಭದ್ರತಾ ಕೊಠಡಿಗಳು, ಮತಗಟ್ಟೆ ಅಧಿಕಾರಿಗಳಿಗೆ ಕೈಗೊಂಡ ತರಬೇತಿ ಪ್ರಕ್ರಿಯೆ ಹಾಗೂ ಪ್ರತಿ ಮತಗಟ್ಟೆಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮಾದರಿ ನೀತಿ ಸಂಹಿತೆ ಸಹಾಯಕ ನೋಡಲ್‌ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಏಪ್ರಿಲ್‌ 21ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಮಸ್ಟರಿಂಗ್‌ ಮತ್ತು ಡಿ ಮಸ್ಟರಿಂಗ್‌ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಆಗದಂತೆ ಸಮಚಿತ್ತದಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ನಿಯೋಜಿತ ಸಿಬ್ಬಂದಿಗೆ ವಹಿಸಿರುವ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸುವ ಸಂಬಂಧ ಸೂಚನೆಗಳನ್ನು ನೀಡುವುದು ಹಾಗೂ ಮಾಹಿತಿಯನ್ನು ತಕ್ಷ ಣ ವರದಿ ಮಾಡುವುದು ಸಹಾಯಕ ಚುನಾವಣಾಧಿಕಾರಿಗಳ ಜವಾಬ್ದಾರಿ ಎಂದು ಅವರು ಹೇಳಿದರು.

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ವಿಶೇಷವಾಗಿ ರೂಪಿಸಿರುವ ವಿಶೇಷಚೇತನ ಮತದಾರರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ಹೆಚ್ಚಿನ ಗಮನ ಹರಿಸಬೇಕು ಹಾಗೂ ಈ ಸಂಬಂಧ ನಿಯೋಜನೆಗೊಂಡಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಬಹು ವಿಧದ ಪುನರ್ವಸತಿ ಕಾರ್ಯಕರ್ತರು ನೆರವು ತಂತ್ರಾಂಶ ನಿರ್ವಹಿಸುವ ಬಗ್ಗೆ ಗಮನ ಹರಿಸಬೇಕು ಎಂದರು.

ಭದ್ರತಾ ಲೋಪಗಳಾಗದಂತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಗತ್ಯವಿರುವ ಸೌಲಭ್ಯಗಳನ್ನು ಹಾಗೂ ಭದ್ರತಾ ಸಿಬ್ಬಂದಿಯನ್ನು ಆಯಕಟ್ಟಿನಲ್ಲಿ ನಿಯೋಜಿಸಬೇಕು ಎಂದು ಅವರು ಸೂಚಿಸಿದರು.

ಪ್ರೊಬೇಷನರಿ ಐಎಎಸ್‌ ಅಧಿಕಾರಿ ದಿಲೀಶ್‌ ಸಸಿ ಮತ್ತಿತರ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ