ಆ್ಯಪ್ನಗರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಾವು ಹೆಚ್ಚಲು ಕಾರಣವೇನು?

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಜೊತೆಗೆ ಸಾವಿನ ಪ್ರಮಾಣವೂ ದಿಢೀರನೆ ಹೆಚ್ಚುತ್ತಿರುವುದಕ್ಕೆ ಕಾರಣವೇನು? ಈ ಬಗ್ಗೆ ತನಿಖೆಯಾಗಬೇಕು ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎನ್‌.ದತ್ತಾ ಆಗ್ರಹಿಸಿದ್ದಾರೆ.

Vijaya Karnataka 20 May 2021, 9:32 pm

ಹೈಲೈಟ್ಸ್‌:

  • ಉತ್ತರ ಕನ್ನಡ ಜಿಲ್ಲೆಯಲ್ಲಿ ದಿಢೀರನೆ ಕೊರೊನಾ ಜೊತೆಗೆ ಸಾವಿನ ಪ್ರಮಾಣವೂ ಹೆಚ್ಚಳ.
  • ಇದರ ಬಗ್ಗೆ ತನಿಖೆ ನಡೆಯಬೇಕೆಂದು ಕರುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎನ್‌.ದತ್ತಾ ಆಗ್ರಹ.
  • ಸರಕಾರದೊಂದಿಗೆ ಜಿಲ್ಲಾಡಳಿತ, ಶಾಸಕರ ನಿಷ್ಕಾಳಜಿ ಇದಕ್ಕೆ ಕಾರಣ ಎಂದು ಆರೋಪ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Virus Outbreak
ಕಾರವಾರ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಏಕೆ ಕೊರೊನಾ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಮೃತಪಡುತ್ತಿದ್ದಾರೆ ಎನ್ನುವ ಕಾರಣ ಪತ್ತೆಗೆ ತನಿಖಾ ತಂಡ ರಚಿಸಬೇಕು ಎಂದು ಕರುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎನ್‌.ದತ್ತಾ ಆಗ್ರಹಿಸಿದ್ದಾರೆ.
ಕಾರವಾರದ ಪತ್ರಿಕಾಭವನದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೊದಲ ಅಲೆ ನಿಯಂತ್ರಣದಲ್ಲಿತ್ತು. ಆದರೆ ಈಗ ನಿಯಂತ್ರಣ ಮಾಡುವಲ್ಲಿ, ಸರಕಾರದೊಂದಿಗೆ ಜಿಲ್ಲಾಡಳಿತ, ಶಾಸಕರ ನಿಷ್ಕಾಳಜಿ ಹೆಚ್ಚಿದೆ. ಜಿಲ್ಲಾಉಸ್ತುವಾರಿ ಸಚಿವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಆಗುತ್ತಿಲ್ಲ. ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.


ಜಿಲ್ಲೆಯಲ್ಲಿ ಕೊರೊನಾದಿಂದ ಸಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಭಯಭೀತರಾಗಿದ್ದಾರೆ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಸೂಕ್ತ ತನಿಖಾ ತಂಡ ರಚಿಸಿ ಜಿಲ್ಲೆಯಲ್ಲಿ ಏಕೆ ಹೆಚ್ಚು ಸಾವು ಸಂಭವಿಸುತ್ತಿದೆ ಎನ್ನುವ ಬಗ್ಗೆ ತನಿಖೆಯಾಗಬೇಕಾಗಿದೆ ಎಂದ ಅವರು ಸರಕಾರದ ದಿನಕ್ಕೊಂದು ನಿಮಯದಿಂದ ಜನರು ಗೊಂದಲಕ್ಕೀಡಾಗುತ್ತಿದ್ದಾರೆ ಎಂದರು.


ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿದ್ದಾರೆ. ಸೋಂಕಿತರನ್ನು ಪತ್ತೆ ಹಚ್ಚಿದಾಗಿ ಹೋಮ್‌ ಐಸೋಲೇಶನ್‌ ಮಾಡುವ ಬದಲು ಹಾಸ್ಟೇಲ್‌ ನಲ್ಲಿ ಐಸೋಲೇಶನ್‌ ಮಾಡುವುದರಿಂದ ಕೊರೊನಾ ಸೋಂಕು ಕುಟುಂಬಂದ ಇತರ ಸದಸ್ಯರಿಗೆ ಹರಡುವುದನ್ನು ತಡೆಯಬಹುದಾಗಿದೆ ಎಂದರು.


ಕೊರೊನಾ ಸೋಂಕಿತರಿಗೆ ಚಿಕಿತ್ಸೆಯ ಸಂದರ್ಭದಲ್ಲಿಅವರಿಗಿರುವ ಇತರೆ ಕಾಯಿಲೆಗಳ ಬಗ್ಗೆ ವೈದ್ಯರು ಗಮನ ಹರಿಸಬೇಕು. ಸೋಂಕಿಗೆ ಚಿಕಿತ್ಸೆ ಪಡೆಯುವ ವೇಳೆ ಇರುವ ಇತರೆ ರೋಗ ಇನ್ನಷ್ಟು ಉಲ್ಬಣಗೊಂಡು ಸಾವಾಗುವ ಸಾಧ್ಯತೆ ಇದೆ. ಈ ನಡುವೆ ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ಸಲ್ಲಿಸುವ ವೈದ್ಯರು ಖಾಸಗಿ ಆಸ್ಪತ್ರೆಯ ವ್ಯಾಮೋಹದಲ್ಲಿದ್ದಾರೆ. ಸರಕಾರಿ ವೈದ್ಯರು ಕೊರೊನಾ ಸೋಂಕು ನಿಯಂತ್ರಿಸಿ ತಡೆಗಟ್ಟುವರೆಗೆ ಅವರು ಖಾಸಗಿ ಆಸ್ಪತ್ರೆಯಲ್ಲಿಕಾರ್ಯ ನಿರ್ವಹಿಸದಂತೆ ಕ್ರಮಕೈಗೊಳ್ಳಬೇಕು ಎಂದರು.

ಈ ನಡುವೆ ಸೋಂಕಿತರಿಗೆ ಉತ್ತಮ ಪೌಷ್ಠಿಕ ಆಹಾರ ನೀಡುವ ಕ್ರಮಕೈಗೊಳ್ಳಬೇಕು. ರೋಗಿಗಳಿಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಬಗ್ಗೆ ಅವರವರ ಮನೆಯವರಿಗೆ ಮಾಹಿತಿ ನೀಡಲು ಹೆಲ್ಪ್ ಲೈನ್‌ ವ್ಯವಸ್ಥೆ ಮಾಡಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ