ಆ್ಯಪ್ನಗರ

ಸಾಲ ಬಾಧೆ: ರೈತ ಆತ್ಮಹತ್ಯೆ

ಮುಂಡಗೋಡ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ರೈತನೋಬ್ಬ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸನಲ್ಲಿ ಮೃತಪಟ್ಟ ಘಟನೆ ಬುಧವಾರ ನಡದಿದೆ.

Vijaya Karnataka 4 Jan 2019, 5:00 am
ಮುಂಡಗೋಡ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ರೈತನೋಬ್ಬ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸನಲ್ಲಿ ಮೃತಪಟ್ಟ ಘಟನೆ ಬುಧವಾರ ನಡದಿದೆ.
Vijaya Karnataka Web debt relief farmer suicide
ಸಾಲ ಬಾಧೆ: ರೈತ ಆತ್ಮಹತ್ಯೆ


ತಾಲೂಕಿನ ಮುಡಸಾಲಿ ಗ್ರಾಮದ ನಿಂಗನಗೌಡ ಫಕ್ಕೀರಗೌಡ ಪಾಟೀಲ(50) ಎಂಬವನೆ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಗದ್ದೆಯಲ್ಲಿ ಬೋರವೆಲ್‌ ಕೊರೆಸಲು ಸಂಘ ಸಂಸ್ಥೆಗಳಲ್ಲಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದ ಎನ್ನಲಾಗಿದೆ. ಬೆಳೆ ಸರಿಯಾಗಿ ಬಾರದೆ ಮನನೊಂದು ಜ.1ರಂದು ಮಧ್ಯಾಹ್ನ ಗದ್ದೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಈತ ಮೃತಪಟ್ಟಿದ್ದು ಈ ಕುರಿತು ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ