ಆ್ಯಪ್ನಗರ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ನಿರ್ಧಾರ

ಕಾರವಾರ: ಜಿಲ್ಲೆಯಿಂದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರಿನ ಆಸ್ಪತ್ರೆಗಳಿಗೆ ತೆರಳುವವರಿಗೆ ಉಡುಪಿ ಜಿಲ್ಲಾಡಳಿತ ಅಡ್ಡಿ ಉಂಟುಮಾಡುತ್ತಿರುವುದನ್ನು ಪ್ರಶ್ನಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ನೀಡಲಾಗಿದೆ. ಅಲ್ಲದೇ ಹೈ ಕೋರ್ಟ್‌ ನಲ್ಲಿಉಡುಪಿ ಜಿಲ್ಲಾಡಳಿತದ ಅಮಾನವೀಯ ನಡೆಯ ವಿರುದ್ಧ ಸಾರ್ವಜನಿಕ

Vijaya Karnataka 21 Apr 2020, 5:00 am
ಕಾರವಾರ: ಜಿಲ್ಲೆಯಿಂದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರಿನ ಆಸ್ಪತ್ರೆಗಳಿಗೆ ತೆರಳುವವರಿಗೆ ಉಡುಪಿ ಜಿಲ್ಲಾಡಳಿತ ಅಡ್ಡಿ ಉಂಟುಮಾಡುತ್ತಿರುವುದನ್ನು ಪ್ರಶ್ನಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ನೀಡಲಾಗಿದೆ. ಅಲ್ಲದೇ ಹೈ ಕೋರ್ಟ್‌ ನಲ್ಲಿಉಡುಪಿ ಜಿಲ್ಲಾಡಳಿತದ ಅಮಾನವೀಯ ನಡೆಯ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು ಎಂದು ನ್ಯಾಯವಾದಿ ಎ. ರವೀಂದ್ರ ನಾಯ್ಕ ತಿಳಿಸಿದ್ದಾರೆ. ಚಿಕಿತ್ಸೆಗಾಗಿ ತೆರಳುವವರಿಗೆ ಲಾಕ್‌ಡೌನ್‌ ಸಂದರ್ಭದಲ್ಲಿಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲೆಯ ಉಸ್ತುವಾರಿ ಸಚಿವರು , ವಿಧಾನ ಸಭಾ ಸಭಾಧ್ಯಕ್ಷರು ಸೇರಿದಂತೆ ಎಲ್ಲಜನಪ್ರತಿನಿಧಿಗಳು ವಿಫಲವಾಗಿರುವುದು ಖಂಡನಾರ್ಹ ಜನಪ್ರತಿನಿಧಿಗಳು ಸಮಸ್ಯಗೆ ಸ್ಪಂದಿಸಿಬೇಕು ಎಂದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವ ಹಿನ್ನೆಲೆಯಲ್ಲಿಹೊರ ಜಿಲ್ಲೆಗಳಿಗೆ ಹೋಗುವುದು ಅನಿವಾರ್ಯವಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಹೊರ ಜಿಲ್ಲೆಗೆ ತೆರಳಲು ಉತ್ತರ ಕನ್ನಡ ಡಿಸಿ ಅನುಮತಿ ಪತ್ರ ಕೊಟ್ಟರೂ ಉಡುಪಿ ಜಿಲ್ಲಾಡಳಿತವು ತಿರಸ್ಕರಿಸುತ್ತಿದೆ. ಇದರಿಂದ ರೋಗಿಗಳು ಚಿಕಿತ್ಸೆ ಸಿಗದೆ ಅರ್ಧ ದಾರಿಯಲ್ಲೇ ಹಿಂತಿರುಗಿ ಬರುವಂತಾಗಿದೆ. ಉಡುಪಿ ಜಿಲ್ಲಾಡಳಿತದ ನಿರ್ಧಾರವು ಅಮಾನವೀಯ ಮತ್ತು ಮೂಲಭೂತ ಹಕ್ಕಿಗೆ ಧಕ್ಕೆ ಉಂಟಾಗುವ ಅತೀರೇಕದ ಕ್ರಮವಾಗಿದೆ ಎಂದು ರವೀಂದ್ರ ನಾಯ್ಕ ಆರೋಪಿಸಿದ್ದಾರೆ.
Vijaya Karnataka Web decision to file a public interest application
ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ನಿರ್ಧಾರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ