ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ಆಗ್ರಹ

ಶಿರಸಿ : ಪ್ರಾಥಮಿಕ ಶಾಲಾ ಶಿಕ್ಷ ಕರ ಪ್ರಮುಖ ಬೇಡಿಕೆಗಳನ್ನು ತಕ್ಷ ಣ ಈಡೇರಿಸುವಂತೆ ಒತ್ತಾಯಿಸಿ ಶಿರಸಿ ಶೈಕ್ಷ ಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷ ಕರು ಶನಿವಾರ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಕಳಿಸಿದರು.

Vijaya Karnataka 17 Feb 2019, 5:00 am
ಶಿರಸಿ : ಪ್ರಾಥಮಿಕ ಶಾಲಾ ಶಿಕ್ಷ ಕರ ಪ್ರಮುಖ ಬೇಡಿಕೆಗಳನ್ನು ತಕ್ಷ ಣ ಈಡೇರಿಸುವಂತೆ ಒತ್ತಾಯಿಸಿ ಶಿರಸಿ ಶೈಕ್ಷ ಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷ ಕರು ಶನಿವಾರ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಕಳಿಸಿದರು.
Vijaya Karnataka Web SRS-16SRS6


ಶೈಕ್ಷ ಣಿಕ ಜಿಲ್ಲಾ ಪ್ರಾಥಮಿಕ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಎಚ್‌ ನಾಯಕ, ಪ್ರಾಥಮಿಕ ಶಾಲಾ ಶಿಕ್ಷ ಕರ ಪ್ರಮುಖ ಆರು ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ರಾಜ್ಯದ ಎಲ್ಲ ಪ್ರಾಥಮಿಕ ಶಿಕ್ಷ ಕರು ಮುತ್ತಿಗೆ ಹಾಕಲಿದ್ದೇವೆ ಎಂದರು.

ಶಿಕ್ಷ ಕರ ವರ್ಗಾವಣೆ ಕಾಯ್ದೆ 2017ರ ಅನ್ವಯ ಶಿಕ್ಷ ಕರ ವರ್ಗಾವಣೆ ಪ್ರತಿ ವರ್ಷ ಮಾರ್ಚ್‌/ಏಪ್ರಿಲ್‌ ತಿಂಗಳಲ್ಲಿಯೇ ಕೈಗೊಳ್ಳಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಹಾಗೂ ಅನೇಕ ಕಾರಣಗಳಿಂದ ಕಳೆದ ಮೂರು ವರ್ಷಗಳಿಂದ ಮಾಡಿಲ್ಲ. ವರ್ಗಾವಣೆ ಬಯಸಿದ ಶಿಕ್ಷ ಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಸರಕಾರಕ್ಕೆ ತಿಳಿಸಿದರೂ ಪ್ರಯೋಜನ ಆಗಿಲ್ಲ. ಆ ನಿಟ್ಟಿನಲ್ಲಿ ಮೂರು ವರ್ಷಗಳ ವರ್ಗಾವಣೆಯ ಶೇಕಡಾ ಮಿತಿ ಪರಿಗಣಿಸಿ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ, ಗ್ರಾಮೀಣ ಕೃಪಾಂಕ ಸೌಲಭ್ಯ ಪಡೆದುಕೊಂಡು ಸೇವೆಯಿಂದ ವಜಾ ಆಗಿರುವ ಶಿಕ್ಷ ಕರ ಪೂರ್ಣ ಸೇವೆ ಪರಿಗಣಿಸಿ ಎಲ್ಲ ಸೌಲಭ್ಯ ನೀಡಬೇಕು ಎಂದರು.

6ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಆಯೋಗದ ಶಿಪಾರಸ್ಸಿನನ್ವಯ ಮುಖ್ಯ ಶಿಕ್ಷ ಕರಿಗೆ ಸೇವಾ ಆಧಾರದ ಮೇಲೆ ವೇತನ ಬಡ್ತಿ ನೀಡುತ್ತಿದ್ದು, ಸೇವಾ ಹಿರಿತನದ ಬಡ್ತಿ ಹೊಂದಿದವರಿಗೆ ಅನ್ಯಾಯವಾಗುತ್ತಿದೆ. ಕೂಡಲೆ 2ನೇ ವೇತನ ಆಯೋಗದ ಶಿಫಾರಸ್ಸಿನಂತೆ ಆದೇಶ ಹೊರಡಿಸಬೇಕು. ಸೇವಾನಿರತ ಪದವೀಧರ ಶಿಕ್ಷ ಕರಿಗೆ ಬಡ್ತಿ ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ಬಿಎಲ್‌ಓ ಹಾಗೂ ಇತರೆ ಶಿಕ್ಷ ಣೇತರ ಕಾರ್ಯಗಳಿಂದ ಮುಕ್ತಿಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಎಚ್‌ ಪಟಗಾರ, ತಾಲೂಕು ಅಧ್ಯಕ್ಷ ಪ್ರಶಾಂತ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ