ಆ್ಯಪ್ನಗರ

ಮೊಬೈಲ್‌ ಬಳಕೆಯಿಂದ ಮಕ್ಕಳ ಆರೋಗ್ಯ ಹಾಳು

ಹೊನ್ನಾವರ: ಅತಿಯಾದ ಮೊಬೈಲ್‌ ಬಳಕೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಾಲೂಕಾ ಆಸ್ಪತ್ರೆಯ ಆಪ್ತಸಮಾಲೋಚಕ ವಿನಾಯಕ ಪಟಗಾರ ಹೇಳಿದರು.

Vijaya Karnataka 24 Oct 2019, 5:00 am
ಹೊನ್ನಾವರ: ಅತಿಯಾದ ಮೊಬೈಲ್‌ ಬಳಕೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಾಲೂಕಾ ಆಸ್ಪತ್ರೆಯ ಆಪ್ತಸಮಾಲೋಚಕ ವಿನಾಯಕ ಪಟಗಾರ ಹೇಳಿದರು.
Vijaya Karnataka Web destroying childrens health through mobile use
ಮೊಬೈಲ್‌ ಬಳಕೆಯಿಂದ ಮಕ್ಕಳ ಆರೋಗ್ಯ ಹಾಳು


ತಾಲೂಕಿನ ಅನಿಲಗೋಡದ ಜನತಾ ವಿದ್ಯಾಲಯದಲ್ಲಿಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಸ್‌ನ್‌ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಹದಿಹರೆಯದ ಆರೋಗ್ಯ ಶಿಕ್ಷಣ ತರಬೇತಿ ಕಾರ್ಯಗಾರದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಹದಿಹರೆಯದ ವಿದ್ಯಾರ್ಥಿಗಳಲ್ಲಿಮೊಬೈಲ್‌ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ. ಸದಾ ಮೊಬೈಲ್‌ ಗೇಮ್‌, ಸಾಮಾಜಿಕ ಜಾಲತಾಣಗಳಲ್ಲಿಸಕ್ರಿಯವಾಗಿರುವುದರಿಂದ ಮಾನಸಿಕ ಸ್ಥಿತಿ ಪ್ರಚೋದನಕಾರಿ ಆಗುತ್ತದೆ. ಇದರ ಪರಿಣಾಮ ಅವರ ನಡುವಳಿಕೆಗಳ ಮೇಲೆ ಆಗುತ್ತಿದೆ ಎಂದರು. ಇಂತಹ ಮಕ್ಕಳ ಮಾನಸಿಕ ಆರೋಗ್ಯ ಏರುಪೇರಾಗುತ್ತದೆ. ನಕಾರಾತ್ಮಕ ನಡುವಳಿಕೆಗೆ ಪ್ರಯತ್ನಿಸುತ್ತಾರೆ ಎಂದರು.

ಮಕ್ಕಳ ಮನಸ್ಸನ್ನು ವಿದ್ಯಾಭ್ಯಾಸದ ಕಡೆ ಕೇಂದ್ರೀಕರಿಸಿದರೆ ಜೀವನದಲ್ಲಿಯಶಸ್ಸು ಸಾಧಿಸಲು ಸಾಧ್ಯ. ಸಾಮಾಜಿಕ ಜಾಲತಾಣದಲ್ಲಿಖಾಸಗಿ ಮಾಹಿತಿ, ಪೋಟೊಗಳನ್ನು ಹಂಚಿಕೊಳ್ಳುವಾಗ ಎಚ್ಚರದಿಂದ ಇರಬೇಕು. ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದರು. ವಿವಿಧ ಉದಾಹರಣೆಗಳ ಮೂಲಕ ಅತಿಯಾದ ಮೊಬೈಲ್‌ ಬಳಕೆಯಿಂದಾಗುವ ಅನಾಹುತಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ನೀಡಲಾಯಿತು. ಹದಿಹರೆಯದಲ್ಲಾಗುವ ಬದಲಾವಣೆ, ನೈತಿಕ ನಡವಳಿಕೆ, ಹೆಚ್‌.ಐ.ವಿ/ಏಡ್ಸ್‌ ಬಗ್ಗೆ ಮಾಹಿತಿ ನೀಡಲಾಯಿತು. ವಿಜ್ಞಾನ ಶಿಕ್ಷಕ ಜಿ.ಆರ್‌ ಶೆಟ್ಟಿ ಸ್ವಾಗತಿಸಿದರು. ಮುಖ್ಯಾಧ್ಯಾಪಕ ಕೆ.ಜಿ. ಹುಲಸ್ವಾರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ