ಆ್ಯಪ್ನಗರ

Karwar Tourism: ಪ್ರವಾಸೋದ್ಯಮಕ್ಕೆ ಡಿಜಿಟಲ್ ಸ್ಪರ್ಷ: ಉತ್ತರ ಕನ್ನಡದ ಪ್ರವಾಸಿ ತಾಣಗಳ ಟಿಕೆಟ್ ಆಪ್‌ ಮೂಲಕ ಲಭ್ಯ

Karwar Tourism: ಪ್ರವಾಸೋದ್ಯಮ ಇಲಾಖೆಗೆ ಡಿಜಿಟಲ್ ಟಚ್ ನೀಡಲಾಗುತ್ತಿದ್ದು, ಎಲ್ಲೆಲ್ಲಿ ಟಿಕೆಟ್ ನೀಡಲಾಗುತ್ತಿದೆಯೋ ಅಲ್ಲಿನ ಪ್ರವಾಸಿ ತಾಣಗಳಿಗೆ ಆಪ್ ಮೂಲಕ ಟಿಕೆಟ್ ಇಂಟಿಗ್ರೇಷನ್ ವ್ಯವಸ್ಥೆಯಡಿ ತರಲು ಯೋಜನೆ ರೂಪಿಸಲಾಗುತ್ತಿದೆ.

Edited byಸೌಮ್ಯಶ್ರೀ ಮಾರ್ನಾಡ್ | Lipi 27 Feb 2023, 6:12 pm

ಹೈಲೈಟ್ಸ್‌:

  • ಒಂದೆಡೆ ವಿಶಾಲವಾದ ಕರಾವಳಿ ತೀರ, ಇನ್ನೊಂದೆಡೆ ಪಶ್ಚಿಮಘಟ್ಟಗಳ ಸರಣಿ ಹೊಂದಿರುವ ವಿಶಿಷ್ಟ ಜಿಲ್ಲೆ ಉತ್ತರಕನ್ನಡ ಪ್ರವಾಸೋದ್ಯಮಕ್ಕೆ ಸಾಕಷ್ಟು ಹೆಸರುವಾಸಿಯಾಗಿದೆ
  • ಎಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ? ಅದರಿಂದ ಎಷ್ಟೆಲ್ಲಾ ಆದಾಯ ಬಂದಿದೆ ಎನ್ನುವ ನಿಖರ ಮಾಹಿತಿ ಪ್ರವಾಸೋದ್ಯಮ ಇಲಾಖೆಗೆ ಸಿಗುತ್ತಿರಲಿಲ್ಲ.
  • ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಜಾರಿಗೊಳಿಸುವುದಕ್ಕಾಗಿ ಆ್ಯಪ್ ರೂಪಿಸಲು ಮುಂದಾಗಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Karwar Beach
ಕಾರವಾರ ಬೀಚ್‌ ( ಸಾಂದರ್ಬಿಕ ಚಿತ್ರ)
ಕಾರವಾರ: ಒಂದೆಡೆ ವಿಶಾಲವಾದ ಕರಾವಳಿ ತೀರ, ಇನ್ನೊಂದೆಡೆ ಪಶ್ಚಿಮಘಟ್ಟಗಳ ಸರಣಿ ಹೊಂದಿರುವ ವಿಶಿಷ್ಟ ಜಿಲ್ಲೆ ಉತ್ತರಕನ್ನಡ ಪ್ರವಾಸೋದ್ಯಮಕ್ಕೆ ಸಾಕಷ್ಟು ಹೆಸರುವಾಸಿಯಾಗಿದೆ.
ಇಂತಹ ಜಿಲ್ಲೆಗೆ ಪ್ರತಿವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರಾದರೂ ಯಾವೆಲ್ಲ ಸ್ಥಳಗಳಿಗೆ ಎಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ? ಅದರಿಂದ ಎಷ್ಟೆಲ್ಲಾ ಆದಾಯ ಬಂದಿದೆ ಎನ್ನುವ ನಿಖರ ಮಾಹಿತಿ ಪ್ರವಾಸೋದ್ಯಮ ಇಲಾಖೆಗೆ ಸಿಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಜಾರಿಗೊಳಿಸುವುದಕ್ಕಾಗಿ ಆ್ಯಪ್ ರೂಪಿಸಲು ಮುಂದಾಗಿದೆ.


Karawara: ಚುನಾವಣೆ ಸಮೀಪಿಸುತ್ತಿದ್ದಂತೆ ಕೇಸರಿ ಶಾಲು ಧರಿಸುವವರನ್ನು ನೋಡಿದ್ರೆ ದಿಗ್ಭ್ರಮೆಯಾಗುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ ಕಿಡಿ

ಹೌದು, ಮುರ್ಡೇಶ್ವರ, ಗೋಕರ್ಣ, ಶಿರಸಿ, ದಾಂಡೇಲಿಯಂಥ ನೈಸರ್ಗಿಕ ಹಾಗೂ ಧಾರ್ಮಿಕ ತಾಣಗಳನ್ನ ಹೊಂದಿರುವ ಉತ್ತರ ಕನ್ನಡಕ್ಕೆ ಪ್ರತಿವರ್ಷ ಲಕ್ಷಾಂತರ ಜನ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೇವಲ ದೇಶೀಯ ಅಷ್ಟೇ ಅಲ್ಲದೆ, ವಿದೇಶ ಪ್ರವಾಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ಹೀಗೆ ಭೇಟಿ ನೀಡಿದವರಿಗೆ ಪ್ರತಿ ತಾಣಗಳಲ್ಲೂ ಟಿಕೆಟ್ ಪಡೆಯುವುದು ಸಮಯ ವ್ಯರ್ಥ ಮಾಡಿದಂತೆ. ಜತಗೆ ಪ್ರವಾಸೋದ್ಯಮ ಇಲಾಖೆಗೂ ಇಂಥ ಪ್ರವಾಸಿಗರ ನಿಖರ ಲೆಕ್ಕ ಸಿಗುತ್ತಿರಲಿಲ್ಲ.

ಹೀಗಾಗಿ ಉತ್ತರ ಕನ್ನಡ ಎಲ್ಲ ಪ್ರವಾಸಿತಾಣಗಳ ಟಿಕೆಟ್ ವ್ಯವಸ್ಥೆಯನ್ನ ಆ್ಯಪ್ ಮೂಲಕ ಒಂದೇ ಕಡೆ ಸಂಯೋಜಿಸಲು ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ಎಲ್ಲೆಲ್ಲಿ ಟಿಕೆಟ್ ಪಡೆದು ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆಯೋ ಅಂತಹ ಎಲ್ಲ ಪ್ರವಾಸಿ ತಾಣಗಳನ್ನ ಟಿಕೆಟ್ ಇಂಟಿಗ್ರೇಷನ್ ಸಿಸ್ಟಮ್ ಅಡಿಯಲ್ಲಿ ತರಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಜಾರಿಯಷ್ಟೇ ಬಾಕಿ ಇದೆ.

Karwar: ಕಾರವಾರ ಸೌಂದರ್ಯಕ್ಕೆ ಆದ್ಯತೆ: ನಗರಸಭೆ ಸದಸ್ಯರ ಇಂದೋರ್‌ ಪ್ರವಾಸ
ಇನ್ನು ಪ್ರವಾಸೋದ್ಯಮ ಇಲಾಖೆ ಜಾರಿಗೆ ತರಲು ಮುಂದಾಗಿರುವ ಈ ಯೋಜನೆಗೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಇಲಾಖೆ ಪ್ರವಾಸಿತಾಣಗಳಿಂದ ಬಂದ ಆದಾಯದಿಂದ ತಾಣಗಳ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನ ಸಮರ್ಪಕವಾಗಿ ಮಾಡುವಂತಾಗಲಿ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಒಟ್ಟಾರೇ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರವಾಸಿಗರ ಅನುಕೂಲದ ದೃಷ್ಟಿಯಿಂದ ಟಿಕೆಟ್ ಇಂಟಿಗ್ರೇಷನ್ ಸಿಸ್ಟಮ್ ಜಾರಿಗೊಳಿಸುತ್ತಿರುವುದು ನಿಜಕ್ಕೂ ಉತ್ತಮವಾದುದೆ ಆದರೂ, ಇದರೊಂದಿಗೆ ಪ್ರವಾಸಿತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯನ್ನೂ ಇಲಾಖೆ ಮಾಡಿದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಇತರರಿಗೆ ಮಾದರಿಯಾಗೋದ್ರಲ್ಲಿ ಯಾವುದೇ ಅನುಮಾನಗಳಿಲ್ಲ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ